Home / ಕವನ / ಕವಿತೆ / ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ ಸ್ವಾಮಿ
ಗುಡಿಪುರ ಗ್ರಾಮದೊಳೇರಿಸಿ ಜಂಡೇ ||ಪ||

ಉಕ್ಕುತಿಹ ಆನಂದ ಭರದಿ
ಸಕ್ಕರೆಯನೋದಕಿಯ ಮಾಡಿ
ಓಂಕಾರ ಪ್ರಣಮವ ನೋಡಿ
ಬಹುಕಾಲ ಭಕ್ತರ ಕೂಡಿ
ಬಸವಾದಿ ಪ್ರಮಥರು ಹಾಡಿ ||೧||

ಅಂಬರಪುರವಿಂಬುಮಾಡಿ
ಸಾಂಬನೂರವಿಲೆ ಬೆಳಿಸ್ಯಾರೊ ಸಾಮಗ್ರಿಗೂಡಿ
ಶಂಭು ಶರಣರು ಸವಿದಾಡಿ
ಹತ್ತುವರ್ಷ ಆದ ಮೇಲೆ
ಸತ್ಯ ಮೆರೆವದು ಮಹಾತ್ಮರಲ್ಲೆ
ಗೊತ್ತುಹಿಡಿ ಗೋವಿಂದರಾಜನ
ಪ್ರಣಮ ಪಂಚಾಕ್ಷರ ಧ್ಯಾನಿಸಿ ನುಡಿ
ಪರಮಾರಾಧ್ಯ ಪಂಚಾಚಾರ್ಯರು ಕೂಡಿ ಆಡವನು ಆಡಿ
ಪರಮೇಶ್ವರ ಪಾರ್ವತಿ ಹಾಡಿ ||೨||

ಪರಲೋಕದವರೆಲ್ಲ ಕೂಡಿ
ಪಂಚಾಗ್ನಿಮಠದೊಳು ಅಡಿಗೆಯ ಮಾಡಿ
ಅನ್ನ ಪ್ರಸಾದವ ನೀಡಿ
ಚೆನ್ನಬಸವೇಶ್ವರರು ಬರುತಿರೆ ಪ್ರಮಥ ಗಣಂಗಳು ಕೂಡಿ
ಕಲ್ಯಾಣಪುರವನು ಮಾಡಿ
ಹರ ಶರಣರ ಲೀಲಾಮೃತ ಪಾಡಿ
ಕಲಿ ಕರ್ಮ ವಿಕಾರಿಗೆ ಜಾಡಿ
ಶಿಶುನಾಳ ಗ್ರಾಮಕ ಕೂಡಿ
ಉಳಿದವರು ಗುರುಪಾದ ಕೂಡಿ ||೩||
* * * *

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...