Home / ಕವನ / ಕವಿತೆ / ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ ಸ್ವಾಮಿ
ಗುಡಿಪುರ ಗ್ರಾಮದೊಳೇರಿಸಿ ಜಂಡೇ ||ಪ||

ಉಕ್ಕುತಿಹ ಆನಂದ ಭರದಿ
ಸಕ್ಕರೆಯನೋದಕಿಯ ಮಾಡಿ
ಓಂಕಾರ ಪ್ರಣಮವ ನೋಡಿ
ಬಹುಕಾಲ ಭಕ್ತರ ಕೂಡಿ
ಬಸವಾದಿ ಪ್ರಮಥರು ಹಾಡಿ ||೧||

ಅಂಬರಪುರವಿಂಬುಮಾಡಿ
ಸಾಂಬನೂರವಿಲೆ ಬೆಳಿಸ್ಯಾರೊ ಸಾಮಗ್ರಿಗೂಡಿ
ಶಂಭು ಶರಣರು ಸವಿದಾಡಿ
ಹತ್ತುವರ್ಷ ಆದ ಮೇಲೆ
ಸತ್ಯ ಮೆರೆವದು ಮಹಾತ್ಮರಲ್ಲೆ
ಗೊತ್ತುಹಿಡಿ ಗೋವಿಂದರಾಜನ
ಪ್ರಣಮ ಪಂಚಾಕ್ಷರ ಧ್ಯಾನಿಸಿ ನುಡಿ
ಪರಮಾರಾಧ್ಯ ಪಂಚಾಚಾರ್ಯರು ಕೂಡಿ ಆಡವನು ಆಡಿ
ಪರಮೇಶ್ವರ ಪಾರ್ವತಿ ಹಾಡಿ ||೨||

ಪರಲೋಕದವರೆಲ್ಲ ಕೂಡಿ
ಪಂಚಾಗ್ನಿಮಠದೊಳು ಅಡಿಗೆಯ ಮಾಡಿ
ಅನ್ನ ಪ್ರಸಾದವ ನೀಡಿ
ಚೆನ್ನಬಸವೇಶ್ವರರು ಬರುತಿರೆ ಪ್ರಮಥ ಗಣಂಗಳು ಕೂಡಿ
ಕಲ್ಯಾಣಪುರವನು ಮಾಡಿ
ಹರ ಶರಣರ ಲೀಲಾಮೃತ ಪಾಡಿ
ಕಲಿ ಕರ್ಮ ವಿಕಾರಿಗೆ ಜಾಡಿ
ಶಿಶುನಾಳ ಗ್ರಾಮಕ ಕೂಡಿ
ಉಳಿದವರು ಗುರುಪಾದ ಕೂಡಿ ||೩||
* * * *

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...