ಮಕ್ಕಳೆಂದರೆ

ಮಕ್ಕಳೆಂದರೆ
ಮಾತೆಯೊಡಲಿಗೆ ತಂಪು ನೀಡಿ
ಸೆರಗಂಚಿನಲಿ ಜಗದ ವಿಸ್ಮಯಕೆ
ಭಾಷ್ಯ ಬರೆದವರು
ಸರಳತೆ ಮುಗ್ಧತೆ ನಿಷ್ಕಪಟತೆಗೆ
ಸಾಟಿಯಾದವರು
ಹೂ ನಗೆಯ ಮಿಂಚು ಹರಿಸಿ
ವ್ಯಥೆಯ ಬದುಕಿಗೆ
ಬೆಳಕಾಗುವವರು

ಮಕ್ಕಳೆಂದರೆ
ತುಂಟಾಟ ಮೊಂಡಾಟಕ್ಕೆ
ಏಣೆಯಾದವರು
ಮೈಮನಕ್ಕೆ ಮುದನೀಡುವ
ಸಕ್ಕರೆಯ ನುಡಿಯವರು

ಹಡೆದವರ ಕನಸುಗಳ ಸಾಕಾರಕ್ಕೆ
ಕೈವಾರವಾದವರು
ಮತ್ತೆ ಹಡೆದವರ ಜೀವನ ಬಂಡಿಗೆ
ಕಡಗೀಲು ಆಗಬಂದವರು
ಹಣ್ಣಲೆ ಬಾಡಿದಾಗ
ಚಿಗುರೆಲೆಯ ಮಿಂಚಾಗಿ
ಬಂಡಿ ಮುನ್ನಡೆಸುವವರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌನ ಮಾತಾಗುವ ಹೊತ್ತು
Next post ಹಿಮ ಮಾನವ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…