ಬಸ್ಸಿನಿಂದ ಇಳಿದವಳಿಗೆ

ನೀನಿಳಿಯುವಾಗಿನ ನಿನ್ನ ನಗ್ನಕಾಲುಗಳ ಸೊಬಗನ್ನು
ಕಣ್ಣುಗಳಲ್ಲಿನ ಆಚಾನಕ ಬೆರಗನ್ನು
ಭಯ ಹಾಗೂ ಲಜ್ಜೆಗಳನ್ನು
ನಾನು ಕಂಡಿರುವೆನು.

ನೀನು ಬಂದಿಳಿದ ಬಸ್ಸು
ಮುಂದೆಲ್ಲಿಗೊ ಹೊರಟು ಹೋಯಿತು.
ಎದ್ದ ಧೂಳಿನಲ್ಲಿ ಯಾರೊ ಹಿಂದಿರುಗಿ ನೋಡಿದರು.

ನೀನು ಮುಖ ಒರೆಸಿಕೊಂಡೆ
ಮುಂಗುರುಳನ್ನು ನೀವಿದೆ
ಒಂದು ಕ್ಷಣ ದಿಕ್ಕೆಟ್ಟವಳು
ಅದನ್ನು ತೋರಿಸಿಕೊಳ್ಳದೆ ನಿಂತೆ

ಆಚೀಚೆ ಅಂಗಡಿಗಳು
ಒಂದು ಆಲದ ಮರ-
ರಸ್ತೆ ಎಲ್ಲಿಗೆ ಹೋಗುತ್ತದೋ
ತಿಳಿಯದು.

ನಾನಾದರೂ ನಿನ್ನ ಬಳಿ ಬರಲಾರೆ
ಕಲ್ಪನೆಯ ಕನ್ನಡಿಯನ್ನು ಒಡೆಯಲಾರೆ
ಒಡೆದರೆ ನೀನಿಲ್ಲ
ನೀ ಬಂದ ನಗರವೂ ಇಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಗ್ಗಿಯ ಸಂಭ್ರಮ
Next post ಸ್ತ್ರೀ ರೋಧನೆ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…