Home / ಕವನ / ಕವಿತೆ / ಪ್ರತಿಮೆ

ಪ್ರತಿಮೆ

ಆತ ನಾಲ್ಕು ರಸ್ತೆಗಳು ಸೇರುವಲ್ಲಿ ಬಂದು ಅತ್ತ-
ಅಳುತ್ತಲೇ ಇದ್ದ. ಕಾರುಗಳು, ಬಸ್ಸುಗಳು,
ಟಾರ್ಪಲಿನ್‌ ಹೊದ್ದ ಭಾರವಾದ ಟ್ರಕ್ಕುಗಳು
ಹಾದು ಹೋಗುತ್ತಲೇ ಇದ್ದುವು.
ಎತ್ತಿನ ನಿಧಾನ ಗಾಡಿಗಳು
ಸಾಗುತ್ತಲೇ ಇದ್ದುವು.

ನಿದ್ರಿಸುವ ನಗರ ಎಚ್ಚರಾಗುತ್ತಿತ್ತು. ಮತ್ತೆ ನಿದ್ರಿಸುತ್ತಿತ್ತು
ಭಾರೀ ಕಸದ ಡಬ್ಬಿಗಳ, ಬೆದೆಯೆದ್ದ ಹಂದಿಗಳ,
ಎಲ್ಲಿಂದಲೋ ಬಂದು ಹೋಗುವ ರೈಲುಗಳ ನಡುವೆ
ತನ್ನ ನಿರಾಳ ಆಲಸ್ಯದಲ್ಲಿ ಬಿದ್ದು.

ಕಳ್ಳಿನಂಗಡಿಯಲ್ಲಿ ಕೂತವರು
ತರಕಾರಿಗೆ ಬಂದ ಹೆಂಗಸರು
ಕೆಲಸಕ್ಕೆ ಕಾಯುವ ಕೂಲಿಗಳು
ಯಾರೂ ಗಮನಿಸಲಿಲ್ಲ-

ಸುತ್ತಲೂ ಅಣಬೆಗಳು ಹುಟ್ಟುವ ತನಕ
ಲಿಲಿಹೂಗಳು ಬೆಳೆಯುವ ತನಕ
ಅರಿಯದೆ ಬಂದ ಮಳೆ, ಯಾರದೊ ನಿಟ್ಟುಸಿರ ಮೇಲಿಂದ
ಬೀಸಿದ ಗಾಳಿ, ಚಳಿಗಾಲದ ಇರುಳು
ತಟ್ಟಿಯೂ ತಟ್ಟಿದಂತಿದ್ದವನು

ಯಾರಿಗೂ ತಿಳಿಯದಲೆ ಎದ್ದು ನಿಂತಿದ್ದನೊಮ್ಮೆಲೇ
ಸಾವರಿಸಿಕೊಂಡು, ಆವರಿಸಿಕೊಂಡು
ನಿಂತು ಏನೋ ಹೇಳಹೊರಟವನು
ಹೇಳುವುದೇಕೆಂದು ತಟಸ್ಥವಾದಂತೆ
ಬಿರಿದೂ ಬಿರಿಯದ ನಗೆ
ಬಚ್ಚಿಟ್ಟ ಪ್ರತಿಯೊಬ್ಬರ ಪಾಪದಂತೆ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...