Home / ಕವನ / ಕವಿತೆ / ಆಗಮನ

ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ
ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು
ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು
ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ

ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ:
ಎಲೆಲೆ ಗಗನ ಸಖಿ ಚಂದ್ರಮುಖಿ ಬಾರೆ
ಕಳಚಿ ಈ ಸೂಟುಬೂಟು ಆ ಅನಗತ್ಯದ ಸೀರೆ
ಮೋಡಗಳ ಮೆತ್ತೆಯೊಳಕ್ಕೆ ಹಾರೋಣ!

ಫಾರೂಕಬ್ದುಲ್ಲನ ಪತನ ವಿರೋಧಪಕ್ಷಗಳ ಪ್ರಕ್ಷೋಭನ
ಆಂತುಲೆಯ ವಿಚಾರಣೆ ಮುಂಬರುವ ಲೋಕಸಭಾ ಚುನಾವಣೆ
ಶೇರುಗಳ ಏರಿಳಿತ ಡಾಲರಿನ ಅನಿರೀಕ್ಷಿತ ಕುಸಿತ
ಶಬನಾ ಆಜ್ಮಿ ಸ್ಮಿತಾಪಾಟೀಲರ ಒಳಜಗಳ

ಆಹ! ಎಂತಹ- ಪೃಷ್ಠ!
ತಬ್ಬಿಕೊಳ್ಳಲೆಂದೇ ಉಬ್ಬಿನಿಂತ ಮಾಟ
ಕೇವಲ ಒಂದು ಒಳಚಡ್ಡಿಯ ಜಾಹೀರು
ಇರಲಿರಲಿ! ಈ ವಾರದ ಭವಿಷ್ಯ
ಏನು ವಿಷಯ?

“ಇಳಿಯಲಿದ್ದೇವೆ ನಾವೀಗ!
ದಯವಿಟ್ಟು ನಿಮ್ಮ ನಿಮ್ಮ
ಸೀಟು ಬೆಲ್ಟುಗಳನ್ನು ಕಟ್ಟಿಕೊಳ್ಳಿರಿ!
ಹೊಗೆಬತ್ತಿ ಸೇದದಿರಿ ! ಕೃತಜ್ಞತೆಗಳು !”
ಎನ್ನುತ್ತಾಳವಳು.

ಹೊರಗೆ ನೋಡುತ್ತಾನೆ-ಮೋಡಗಳಿಲ್ಲ
(ಶುಭ್ರ ವಾತಾವರಣ, ಸುಖಾಗಮನ)
ಎಷ್ಟೋ ದೂರ ಕೆಳಗೆ
ನೆಲ ಬಿದ್ದಿದೆ ಚಾಪೆಯ ಹಾಗೆ
ಮನೆ ಮರ ಕಾರ್ಖಾನೆ
ಮರೆತುಬಿಟ್ಪ ಆಟಿಕೆಗಳಂತೆ
ಮೊಡವೆಗಳಂಥ ಬಂಡೆಗಳು
ಇರುವೆಗಳಂತೆ ಸರಿಯುವ ಮನುಷ್ಯರು
ಇಷ್ಟೆತ್ತರದಿಂದಲೇ ಹೀಗೆ ಕಾಣಿಸಿದರೆ
ಇನ್ನೊಂದು ಗ್ರಹದಿಂದ ಹೇಗೆ ಕಾಣಿಸಬೇಡ!
ಎಂದುಕೊಳ್ಳುತ್ತಾನೆ-ಸೆಜಿಟೇರಿಯಸ್
ಧನುರ್ಧಾರಿ ಎಷ್ಟೋ ಬೇಟೆಗಳ ಹೊಡೆದವನು
ಸೀಟಿನೊಳಕ್ಕೆ ಜಾರಿ

ಎಂಥ ಸೆಕೆ ನೆಲದ ಮೇಲೆ
ನೂಕು ನುಗ್ಗಲು ಬೇರೆ!
ಯಾರ ಹೆಂಡಿರು ಯಾರ ಮಕ್ಕಳು
ಯಾರು ಯಾರಿಗೆ ಹಿಡಿದು ನಿಂತ ಹಾರಗಳು?
ಬಾಗಿಲಿನಿಂದಾಚೆ ಇರಿಸುತ್ತಾನೆ ಪಾದ
ಪರಿಚಯದ ಮುಖಗಳಿಗಾಗಿ ಹುಡುಕುತ್ತಾನೆ
ಇವನಲ್ಲ! ಇವನಲ್ಲ! ಎನ್ನುತ್ತವೆ
ಪ್ರತಿಯೊಂದು ಜತೆ ಕಣ್ಣುಗಳು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...