Home / ಕವನ / ಕವಿತೆ / ಆಗಮನ

ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ
ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು
ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು
ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ

ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ:
ಎಲೆಲೆ ಗಗನ ಸಖಿ ಚಂದ್ರಮುಖಿ ಬಾರೆ
ಕಳಚಿ ಈ ಸೂಟುಬೂಟು ಆ ಅನಗತ್ಯದ ಸೀರೆ
ಮೋಡಗಳ ಮೆತ್ತೆಯೊಳಕ್ಕೆ ಹಾರೋಣ!

ಫಾರೂಕಬ್ದುಲ್ಲನ ಪತನ ವಿರೋಧಪಕ್ಷಗಳ ಪ್ರಕ್ಷೋಭನ
ಆಂತುಲೆಯ ವಿಚಾರಣೆ ಮುಂಬರುವ ಲೋಕಸಭಾ ಚುನಾವಣೆ
ಶೇರುಗಳ ಏರಿಳಿತ ಡಾಲರಿನ ಅನಿರೀಕ್ಷಿತ ಕುಸಿತ
ಶಬನಾ ಆಜ್ಮಿ ಸ್ಮಿತಾಪಾಟೀಲರ ಒಳಜಗಳ

ಆಹ! ಎಂತಹ- ಪೃಷ್ಠ!
ತಬ್ಬಿಕೊಳ್ಳಲೆಂದೇ ಉಬ್ಬಿನಿಂತ ಮಾಟ
ಕೇವಲ ಒಂದು ಒಳಚಡ್ಡಿಯ ಜಾಹೀರು
ಇರಲಿರಲಿ! ಈ ವಾರದ ಭವಿಷ್ಯ
ಏನು ವಿಷಯ?

“ಇಳಿಯಲಿದ್ದೇವೆ ನಾವೀಗ!
ದಯವಿಟ್ಟು ನಿಮ್ಮ ನಿಮ್ಮ
ಸೀಟು ಬೆಲ್ಟುಗಳನ್ನು ಕಟ್ಟಿಕೊಳ್ಳಿರಿ!
ಹೊಗೆಬತ್ತಿ ಸೇದದಿರಿ ! ಕೃತಜ್ಞತೆಗಳು !”
ಎನ್ನುತ್ತಾಳವಳು.

ಹೊರಗೆ ನೋಡುತ್ತಾನೆ-ಮೋಡಗಳಿಲ್ಲ
(ಶುಭ್ರ ವಾತಾವರಣ, ಸುಖಾಗಮನ)
ಎಷ್ಟೋ ದೂರ ಕೆಳಗೆ
ನೆಲ ಬಿದ್ದಿದೆ ಚಾಪೆಯ ಹಾಗೆ
ಮನೆ ಮರ ಕಾರ್ಖಾನೆ
ಮರೆತುಬಿಟ್ಪ ಆಟಿಕೆಗಳಂತೆ
ಮೊಡವೆಗಳಂಥ ಬಂಡೆಗಳು
ಇರುವೆಗಳಂತೆ ಸರಿಯುವ ಮನುಷ್ಯರು
ಇಷ್ಟೆತ್ತರದಿಂದಲೇ ಹೀಗೆ ಕಾಣಿಸಿದರೆ
ಇನ್ನೊಂದು ಗ್ರಹದಿಂದ ಹೇಗೆ ಕಾಣಿಸಬೇಡ!
ಎಂದುಕೊಳ್ಳುತ್ತಾನೆ-ಸೆಜಿಟೇರಿಯಸ್
ಧನುರ್ಧಾರಿ ಎಷ್ಟೋ ಬೇಟೆಗಳ ಹೊಡೆದವನು
ಸೀಟಿನೊಳಕ್ಕೆ ಜಾರಿ

ಎಂಥ ಸೆಕೆ ನೆಲದ ಮೇಲೆ
ನೂಕು ನುಗ್ಗಲು ಬೇರೆ!
ಯಾರ ಹೆಂಡಿರು ಯಾರ ಮಕ್ಕಳು
ಯಾರು ಯಾರಿಗೆ ಹಿಡಿದು ನಿಂತ ಹಾರಗಳು?
ಬಾಗಿಲಿನಿಂದಾಚೆ ಇರಿಸುತ್ತಾನೆ ಪಾದ
ಪರಿಚಯದ ಮುಖಗಳಿಗಾಗಿ ಹುಡುಕುತ್ತಾನೆ
ಇವನಲ್ಲ! ಇವನಲ್ಲ! ಎನ್ನುತ್ತವೆ
ಪ್ರತಿಯೊಂದು ಜತೆ ಕಣ್ಣುಗಳು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...