ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ
ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು
ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು
ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ

ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ:
ಎಲೆಲೆ ಗಗನ ಸಖಿ ಚಂದ್ರಮುಖಿ ಬಾರೆ
ಕಳಚಿ ಈ ಸೂಟುಬೂಟು ಆ ಅನಗತ್ಯದ ಸೀರೆ
ಮೋಡಗಳ ಮೆತ್ತೆಯೊಳಕ್ಕೆ ಹಾರೋಣ!

ಫಾರೂಕಬ್ದುಲ್ಲನ ಪತನ ವಿರೋಧಪಕ್ಷಗಳ ಪ್ರಕ್ಷೋಭನ
ಆಂತುಲೆಯ ವಿಚಾರಣೆ ಮುಂಬರುವ ಲೋಕಸಭಾ ಚುನಾವಣೆ
ಶೇರುಗಳ ಏರಿಳಿತ ಡಾಲರಿನ ಅನಿರೀಕ್ಷಿತ ಕುಸಿತ
ಶಬನಾ ಆಜ್ಮಿ ಸ್ಮಿತಾಪಾಟೀಲರ ಒಳಜಗಳ

ಆಹ! ಎಂತಹ- ಪೃಷ್ಠ!
ತಬ್ಬಿಕೊಳ್ಳಲೆಂದೇ ಉಬ್ಬಿನಿಂತ ಮಾಟ
ಕೇವಲ ಒಂದು ಒಳಚಡ್ಡಿಯ ಜಾಹೀರು
ಇರಲಿರಲಿ! ಈ ವಾರದ ಭವಿಷ್ಯ
ಏನು ವಿಷಯ?

“ಇಳಿಯಲಿದ್ದೇವೆ ನಾವೀಗ!
ದಯವಿಟ್ಟು ನಿಮ್ಮ ನಿಮ್ಮ
ಸೀಟು ಬೆಲ್ಟುಗಳನ್ನು ಕಟ್ಟಿಕೊಳ್ಳಿರಿ!
ಹೊಗೆಬತ್ತಿ ಸೇದದಿರಿ ! ಕೃತಜ್ಞತೆಗಳು !”
ಎನ್ನುತ್ತಾಳವಳು.

ಹೊರಗೆ ನೋಡುತ್ತಾನೆ-ಮೋಡಗಳಿಲ್ಲ
(ಶುಭ್ರ ವಾತಾವರಣ, ಸುಖಾಗಮನ)
ಎಷ್ಟೋ ದೂರ ಕೆಳಗೆ
ನೆಲ ಬಿದ್ದಿದೆ ಚಾಪೆಯ ಹಾಗೆ
ಮನೆ ಮರ ಕಾರ್ಖಾನೆ
ಮರೆತುಬಿಟ್ಪ ಆಟಿಕೆಗಳಂತೆ
ಮೊಡವೆಗಳಂಥ ಬಂಡೆಗಳು
ಇರುವೆಗಳಂತೆ ಸರಿಯುವ ಮನುಷ್ಯರು
ಇಷ್ಟೆತ್ತರದಿಂದಲೇ ಹೀಗೆ ಕಾಣಿಸಿದರೆ
ಇನ್ನೊಂದು ಗ್ರಹದಿಂದ ಹೇಗೆ ಕಾಣಿಸಬೇಡ!
ಎಂದುಕೊಳ್ಳುತ್ತಾನೆ-ಸೆಜಿಟೇರಿಯಸ್
ಧನುರ್ಧಾರಿ ಎಷ್ಟೋ ಬೇಟೆಗಳ ಹೊಡೆದವನು
ಸೀಟಿನೊಳಕ್ಕೆ ಜಾರಿ

ಎಂಥ ಸೆಕೆ ನೆಲದ ಮೇಲೆ
ನೂಕು ನುಗ್ಗಲು ಬೇರೆ!
ಯಾರ ಹೆಂಡಿರು ಯಾರ ಮಕ್ಕಳು
ಯಾರು ಯಾರಿಗೆ ಹಿಡಿದು ನಿಂತ ಹಾರಗಳು?
ಬಾಗಿಲಿನಿಂದಾಚೆ ಇರಿಸುತ್ತಾನೆ ಪಾದ
ಪರಿಚಯದ ಮುಖಗಳಿಗಾಗಿ ಹುಡುಕುತ್ತಾನೆ
ಇವನಲ್ಲ! ಇವನಲ್ಲ! ಎನ್ನುತ್ತವೆ
ಪ್ರತಿಯೊಂದು ಜತೆ ಕಣ್ಣುಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹದ
Next post ಮಲೆನಾಡು

ಸಣ್ಣ ಕತೆ

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys