Home / ಕವನ / ಕವಿತೆ / ಆನೆಗಳು ಎರಡು ವಿಧ

ಆನೆಗಳು ಎರಡು ವಿಧ

ಆನೆಗಳು ಎರಡು ವಿಧ-ಕಾಡಾನೆಗಳೆಂದು ನೀರಾನೆಗ-
ಳೆಂದು. ಆದರೆ ಆರಂಭದಲ್ಲಿ ಮಾತ್ರ ಇಂಥ ವ್ಯತ್ಯಾ-
ಸವೇ ಇರಲಿಲ್ಲ- ಎಲ್ಲ ಆನೆಗಳೂ ನೀರೊಳಗೇ
ಇದ್ದುವು. ಜಲಾಂತರ್ಗಾಮಿಗಳಾಗಿ ತಿರುಗಾಡುತಿದ್ದುವು
ದೊಡ್ಡ ತೆರೆಗಳನೆಬ್ಬಿಸುತ್ತ ಈಜಾಡಿಕೊಂಡಿದ್ದುವು
ಪ್ರೀತಿ ಜಗಳ ಹೋರಾಟ ಜನನ ಮರಣ ಎಲ್ಲವೂ ಅಲ್ಲಿಯೇ
ಆಗ ಕೆಲವಾನೆಗಳೆಂದುವು-ಛೇ ಇದೆಂಥ ಬಾಳು!
ಕೇವಲ ಮೀನು ಕಪ್ಪೆಗಳಂತೆ ನಾವು ಯಾವಾಗಲೂ
ನೀರೊಳಗೆ ಅಡಗುವುದೇ ?! ಇಷ್ಟು ಭಾರೀ ದೇಹವನು
ಹೊತ್ತಿದ್ದು ಮಳೆಗೆ ನೆರೆಗೆ ಝಂಝಾವಾತಕ್ಕೆ
ಗುರಿಯಾಗಿ! ಆನೆಯ ವಂಶದವರೇ! ದಂಡೆಯೇರಲು
ಧೈರ್ಯವಿದ್ದವರೆಲ್ಲ ಬನ್ನಿ ಮುಂದೆ! ಅದೋ ಬಯಲು
ಅದೋ ಅರಣ್ಯ! ಅದೋ ಘಟ್ಟ! ಅದೋ ಅದೋ
ಪರ್ವತದ ಶಿಖರಗಳು!

ದೊಡ್ಡಾನೆ ಸಣ್ಣಾನೆ ಮರಿಯಾನೆಗಳೆಂದು ಅನೇಕ
ಆನೆಗಳು ತಾ ಮುಂದೆ ತಾ ಮುಂದೆ ಎನ್ನುತ್ತ
ಹತ್ತಿದುವು ದಂಡೆ ಹಾದುವು ಬಯಲು ಹೊಕ್ಕವು ಅರಣ್ಯ
ಏರಿದುವು ಘಟ್ಟ ಅಲೆದುವು ಪರ್ವತದ ಶಿಖರಗಳ
ಮೊದಮೊದಲು ತುಸು ಕಷ್ಟವೇ ಆಯಿತು ಅವಕ್ಕೆ
ಉಸಿರುಗಟ್ಟಿದಂತಾಯಿತು ದೇಹ ತೂಗಿ ತೊನೆ-
ದಂತಾಯಿತು ಎಲ್ಲ ಕೇವಲ ಕೆಲವೇ ವರ್ಷಗಳು
ಕ್ರಮೇಣ ಕಿವಿಗಳು ಗೆರಸೆಗಳಾದುವು ಪಾದಗಳು
ಗೊರಸೆಯಾದುವು ಎಲ್ಲಕ್ಕಿಂತ ಮುಖ್ಯ ಮೂಗು
ಮಹಾಸೊಂಡಿಲಾಯಿತು ಹಲ್ಲುಗಳು ಉಕ್ಕಿನ ಖಡ್ಗ –
ದಂತಾದುವು ಇಂಥ ಕಾಡಾನೆಗಳಿಗೆ ಮೃಗರಾಜನೆಂಬ
ಬಿರುದೂ ಬಂತು. ಅವು ಘೊಳ್ಳನೆ ಘೀಳಿಟ್ಟು
ನೀರಾನೆಗಳನ್ನು ಹಂಗಿಸಿದುವು. ನೀರಾನೆಗಳು ಪಾಪ!
ಹುಟ್ಟಾ ಆಲಸಿಗಳು ಇದ್ದಲ್ಲಿ ಇರುವಂಥ ಧಡ್ಡರು
ಯಾವ ಸಾಹಸವನ್ನೂ ಕೈಗೊಳ್ಳದ ದಪ್ಟಚರ್ಮದ
ಮೈಗಳ್ಳರು.

ಕಾಡಾನೆಗಳು ತಾನೆ ಎಷ್ಟು ಕಾಲ ಸ್ವೇಚ್ಛೆಯಿಂದ
ಇದ್ದಾವು? ಅವು ಖೆಡ್ಡಾದಲ್ಲಿ ಬಿದ್ದುವು. ಮನುಷ್ಯರ
ಕೈಯಲ್ಲಿ ಸಿಕ್ಕಿದುವು. ಮಾವುತರೆಂಬ ಜನರಿಂದ
ಅಂಕುಶದ ತಿವಿತ ಅನುಭವಿಸುತ್ತ ಭಾರವಾದ
ವಸ್ತುಗಳನ್ನು ಎಳೆಯತೊಡಗಿದುವು. ಜಾತ್ರೆಯಲ್ಲಿ
ದೇವರನ್ನು ಹೊರತೊಡಗಿದುವು ಈಗೀಗ ಅವು
ಸರ್ಕಸ್ಸಿನಲ್ಲಿ ಎಗರಾಡುತ್ತವೆ ಪಾರ್ಕುಗಳಲ್ಲಿ ಮಕ್ಕಳಿಗೆ
ಅಶ್ಚರ್ಯದ ಪ್ರಾಣಿಗಳಾಗಿ ನಿಲ್ಲುತ್ತವೆ-ಇತ್ತ ನೀರಾನೆಗಳು
ಜೀವವಿಕಾಸವನ್ನೆ ಧಿಕ್ಕರಿಸಿವೆಯೊ ಮರೆತಿವೆಯೊ
ಜಲದೊಳಗಿನ ನಾದಜಗತ್ತಿನಲ್ಲಿ ಮೈಮಮರೆತಿವೆಯೊ
ಹೇಳುವುದು ಹೇಗೆ ? ಅವುಗಳ ನಡುವೆ ಈಚೆಗೆ
ಮುಂದಾಳುಗಳು ಯಾರೂ ಬಂದಿಲ್ಲ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...