Home / ಕವನ / ಕವಿತೆ / ಬಿಳಿಯ ಗೋಡೆಯಲಿ

ಬಿಳಿಯ ಗೋಡೆಯಲಿ

ಬಿಳಿಯ ಗೋಡೆಯಲಿ ಬರೆದ ಅಕ್ಷರಗಳು
ಮಾಯುವುದಿಲ್ಲ ಬೇಗನೆ
ದಾರಿಯಲಿ ನಡೆವವರನ್ನು ನೋಡುತ್ತ
ಕುಳಿತುಕೊಳ್ಳುತ್ತವೆ ಸುಮ್ಮನೆ
ಒಬ್ಬೊಬ್ಬರಿಗೆ ಒಂದೊಂದು ರೀತಿ
ಅರ್ಥವಾಗುತ್ತ ಹೊಗುತ್ತವೆ
ಅರ್ಥವಾಗದಿದ್ದಾಗ ಪ್ರಶ್ನೆಗಳ ರೂಪದಲಿ
ಬಹುಕಾಲ ಕಾಡುತ್ತವೆ
ಕಾಲ ಸರಿದಂತೆ ಮಹಾಪ್ರಾಣಗಳು
ಪ್ರಾಣವನ್ನೆ ಕಳೆದುಕೊಳ್ಳುತ್ತವೆ
ಎಲ್ಲ ಅಕ್ಷರಗಳೂ ಕಾಗುಣಿತ ತಪ್ಪಿ
ಮಾಯವಾಗುತ್ತವೆ

ಎಲ್ಲಿ ಹೋದುವು ಅವು? ಗೋಡೆಯೊಳಗೆ
ಸೇರಿದುವೆ? ಮಳೆಗೆ ಕೊಚ್ಚಿದುವೆ ?
ನೋಡಿದವರ ಮನವ ಹೊಕ್ಕು ಹೊರ
ಬರದೆ ಉಳಿದುವೆ? ಕವಿಯೊಬ್ಬನು
ಈ ದಾರಿ ಬಂದವನು ಹೆಕ್ಕಿಕೊಂಡನೆ
ಒಂದೊಂದಾಗಿ ಬಿದ್ದ ಹೂವುಗಳನ್ನು
ಹೆಕ್ಕಿಕೊಳ್ಳುವಂತೆ? ಯಾತಕ್ಕೆ?
ಏನ ಮಾಡಿದನು? ಏನ ಕೇಳಿದನು?
ಚೈನಾದ ಗೋಡೆಯೆ ಬೆಬಿಲೋನದ
ಗೋಡೆಯೆ ಕೆಂಪುಕೋಟೆಯ ಗೋಡೆಯೆ
ಪ್ಯಾಲೆಸ್ತಿನದ ಅಳುವ ಗೋಡೆಯೆ
ಅತ್ತರೆಷ್ಟು ಜನ ಇಲ್ಲಿ ಬ೦ದು
ಸತ್ತರಿನ್ನೆಷ್ಟು? ಕವಿಯೆ ಎಚ್ಚರಿಸು ಎಲ್ಲರನು
ಎಚ್ಚರಿಸು ಅವರ ಭಾಷೆಯನು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...