Home / ಕವನ / ಕವಿತೆ / ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು
ಕುಳಿತಲ್ಲಿ ಕೂರುವುದಿಲ್ಲ
ಒಂದು ವಸ್ತುವಿನಿಂದ
ಇನ್ನೊಂದು ವಸ್ತುವಿಗೆ
ನೆಗೆಯುತ್ತಲೇ ಇರುತ್ತದೆ

ಅದು ಉದಾತ್ತವಾಗಲು ಬಯಸುತ್ತಲೇ
ಸಣ್ಣತನವನ್ನೂ ತೋರಿಸುತ್ತದೆ
ತಥಾಗತನ ಧ್ಯಾನದಲ್ಲಿ ಕೂಡ
ಯೋನಿ ಶಿಶ್ನಗಳ ಕುರಿತು
ಯೋಚಿಸುತ್ತದೆ

ಶಬ್ದ ನಿಶ್ಯಬ್ದಗಳ
ಶ್ವಾಸ ನಿಶ್ವಾಸಗಳ
ಬೆನ್ನು ಹತ್ತುತ್ತದೆ
ತೆರೆದ ಕಿಟಕಿಗಳ
ಒಳಗೆ ಹಣಿಕುತ್ತದೆ

ಕಾಣುವ ಸಂಗತಿಗಳನ್ನು
ಕಡೆಗಣಿಸುತ್ತದೆ
ಕಾಣದ ಸಂಗತಿಗಳನ್ನು
ಕಂಡಿದ್ದೇನೆಂದು
ಭ್ರಮಿಸುತ್ತದೆ

ಸರಿ ಸರಿ ಯೋಚಿಸುದದನೆಲ್ಲ
ಬರೆಯಬೇಕಾಗಿಲ್ಲ
ಎಲ್ಲ ಮುಚ್ಚು ಮರೆಗಳನೂ
ತೆರೆದು ಮುಖಕ್ಕೆ
ಹಿಡಿಯಬೇಕಾಗಿಲ್ಲ

ತೋರಿಸು ಆಕಾಶ, ಸಮುದ್ರ.
ಹಿಮಾಲಯ, ಅಚ್ಛೋದ ಸರೋವರ
ನಾಗಾರ್ಜುನ ಸಾಗರ ಅಣೆಕಟ್ಟು
ಕನಾಟ್ ಸರ್ಕಲು
ಶೆರಾಟನ್ ಹೋಟೆಲು

ಒಂದೊಂದು ವಿಚಾರಗಳನ್ನೂ
ಚಿನ್ನದ ನೀರಲ್ಲಿ ಅದ್ದಿ ತೆಗೆ-ಆಗ ಅವು
ಥಳಥಳಿಸುವುವು-ಅವರವರ
ಪ್ರಿಯತಮೆಯರ ಕೊರಳ
ಆಭರಣಗಳಂತೆ

ಜನರು ಆದರಿಸುವರು ಮಹಾ
ದಾರ್ಶನಿಕನೆಂದು ಹೊಗಳುವರು
ಎಲ್ಲರೂ ಕರೆಯುವರು
ಯಾರೂ ತಮ್ಮ ಹೆಂಡಂದಿರನ್ನು
ನಿನ್ನ ಜತೆ ಬಿಡಲು ಹೆದರರು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...