Home / ಕವನ / ಕವಿತೆ / ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು
ಕುಳಿತಲ್ಲಿ ಕೂರುವುದಿಲ್ಲ
ಒಂದು ವಸ್ತುವಿನಿಂದ
ಇನ್ನೊಂದು ವಸ್ತುವಿಗೆ
ನೆಗೆಯುತ್ತಲೇ ಇರುತ್ತದೆ

ಅದು ಉದಾತ್ತವಾಗಲು ಬಯಸುತ್ತಲೇ
ಸಣ್ಣತನವನ್ನೂ ತೋರಿಸುತ್ತದೆ
ತಥಾಗತನ ಧ್ಯಾನದಲ್ಲಿ ಕೂಡ
ಯೋನಿ ಶಿಶ್ನಗಳ ಕುರಿತು
ಯೋಚಿಸುತ್ತದೆ

ಶಬ್ದ ನಿಶ್ಯಬ್ದಗಳ
ಶ್ವಾಸ ನಿಶ್ವಾಸಗಳ
ಬೆನ್ನು ಹತ್ತುತ್ತದೆ
ತೆರೆದ ಕಿಟಕಿಗಳ
ಒಳಗೆ ಹಣಿಕುತ್ತದೆ

ಕಾಣುವ ಸಂಗತಿಗಳನ್ನು
ಕಡೆಗಣಿಸುತ್ತದೆ
ಕಾಣದ ಸಂಗತಿಗಳನ್ನು
ಕಂಡಿದ್ದೇನೆಂದು
ಭ್ರಮಿಸುತ್ತದೆ

ಸರಿ ಸರಿ ಯೋಚಿಸುದದನೆಲ್ಲ
ಬರೆಯಬೇಕಾಗಿಲ್ಲ
ಎಲ್ಲ ಮುಚ್ಚು ಮರೆಗಳನೂ
ತೆರೆದು ಮುಖಕ್ಕೆ
ಹಿಡಿಯಬೇಕಾಗಿಲ್ಲ

ತೋರಿಸು ಆಕಾಶ, ಸಮುದ್ರ.
ಹಿಮಾಲಯ, ಅಚ್ಛೋದ ಸರೋವರ
ನಾಗಾರ್ಜುನ ಸಾಗರ ಅಣೆಕಟ್ಟು
ಕನಾಟ್ ಸರ್ಕಲು
ಶೆರಾಟನ್ ಹೋಟೆಲು

ಒಂದೊಂದು ವಿಚಾರಗಳನ್ನೂ
ಚಿನ್ನದ ನೀರಲ್ಲಿ ಅದ್ದಿ ತೆಗೆ-ಆಗ ಅವು
ಥಳಥಳಿಸುವುವು-ಅವರವರ
ಪ್ರಿಯತಮೆಯರ ಕೊರಳ
ಆಭರಣಗಳಂತೆ

ಜನರು ಆದರಿಸುವರು ಮಹಾ
ದಾರ್ಶನಿಕನೆಂದು ಹೊಗಳುವರು
ಎಲ್ಲರೂ ಕರೆಯುವರು
ಯಾರೂ ತಮ್ಮ ಹೆಂಡಂದಿರನ್ನು
ನಿನ್ನ ಜತೆ ಬಿಡಲು ಹೆದರರು
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...