ಹೈದರಾಬಾದಿನಲ್ಲಿ ಜೂನ್

ಹೈದರಾಬಾದಿನಲ್ಲಿ ಜೂನ್ ಎಂದೊಡನೆ
ಬೇಕಾದ್ದು ತಳತಳಿಸುವ ಗ್ಲಾಸುಗಳಲ್ಲಿ
ತಂಪು ಪಾನೀಯಗಳ ಸುಖ
ಮಾತಾಡುವುದಕ್ಕೆ ನೋಡುವುದಕ್ಕೆ
ಅವರವರು ಬಯಸುವ ಮುಖ

ಅದೃಷ್ಟವಿದ್ದರೆ ಆಗಾಗ ಸುಳಿಯುವ ಗಾಳಿ
ಆ ಗಾಳಿಯಲ್ಲೆಲ್ಲೋ ತೆರೆಗಳ ತೇವ
ಶಾಖದೊಂದಿಗೆ ಸಮ್ಮಿಳಿಸಿದ್ದು
ಎಷ್ಟೋ ಒಣ ಬಯಲುಗಳನ್ನೂ
ದಂಡೆಗಳನ್ನೂ ಹಾಯ್ದು

ನಾಳೆ ಬರುವುದು ಮಳೆ ಇಂದು ಬರದಿದ್ದರೆ
ಅಥವಾ ನಾಡಿದು, ಮುಂದಿನ ವಾರ
ಬಂದೇ ಬರುವುದಂತೂ ನಿಜ
ಆತನಕ ಹಿಂದಿನ ಪ್ರಣಯದ ನೆನಪು
ಮೂಡುವುದು ಸಹಜ

ಸಂಜೆಯ ದೀಪಗಳನ್ನು ತುಸು ತಡವಾಗಿ
ಹಚ್ಚಿದರೆ ಸಾಲದೆ? ಆಕಾಶದ ಬೆಳಕನ್ನು
ಓಡಿಸಬೇಕು ಯಾಕೆ?
ನಮ್ಮ ದೀಪಗಳು ನಾವೆ-ಪರಸ್ಪರ
ಬೆಳಗುವವರೆಗೆ

ಅಲ್ಲಿದೆ ಈ ಸಂಜೆಯ ವಿಜೃಂಭಣೆಯಲ್ಲಿ
ಎಷ್ಟೊಂದು ದಿವ್ಯ ಮನುಷ್ಯರ ಮುಖ!
ಅಹ! ಏನದು ಕೇಳಿಸಿದ ಸದ್ದು?
ಏನಿಲ್ಲ, ಕಿಟಕಿ ಗಾಜಿನ ಮೇಲೆ ಬಿದ್ದ
ಆಕಸ್ಮಿಕ ಹನಿಯದ್ದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸ್ಥಿಮಿತ
Next post ಹುಷಾರು

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

cheap jordans|wholesale air max|wholesale jordans|wholesale jewelry|wholesale jerseys