Home / ಕವನ / ಕವಿತೆ / ಹೈದರಾಬಾದಿನಲ್ಲಿ ಜೂನ್

ಹೈದರಾಬಾದಿನಲ್ಲಿ ಜೂನ್

ಹೈದರಾಬಾದಿನಲ್ಲಿ ಜೂನ್ ಎಂದೊಡನೆ
ಬೇಕಾದ್ದು ತಳತಳಿಸುವ ಗ್ಲಾಸುಗಳಲ್ಲಿ
ತಂಪು ಪಾನೀಯಗಳ ಸುಖ
ಮಾತಾಡುವುದಕ್ಕೆ ನೋಡುವುದಕ್ಕೆ
ಅವರವರು ಬಯಸುವ ಮುಖ

ಅದೃಷ್ಟವಿದ್ದರೆ ಆಗಾಗ ಸುಳಿಯುವ ಗಾಳಿ
ಆ ಗಾಳಿಯಲ್ಲೆಲ್ಲೋ ತೆರೆಗಳ ತೇವ
ಶಾಖದೊಂದಿಗೆ ಸಮ್ಮಿಳಿಸಿದ್ದು
ಎಷ್ಟೋ ಒಣ ಬಯಲುಗಳನ್ನೂ
ದಂಡೆಗಳನ್ನೂ ಹಾಯ್ದು

ನಾಳೆ ಬರುವುದು ಮಳೆ ಇಂದು ಬರದಿದ್ದರೆ
ಅಥವಾ ನಾಡಿದು, ಮುಂದಿನ ವಾರ
ಬಂದೇ ಬರುವುದಂತೂ ನಿಜ
ಆತನಕ ಹಿಂದಿನ ಪ್ರಣಯದ ನೆನಪು
ಮೂಡುವುದು ಸಹಜ

ಸಂಜೆಯ ದೀಪಗಳನ್ನು ತುಸು ತಡವಾಗಿ
ಹಚ್ಚಿದರೆ ಸಾಲದೆ? ಆಕಾಶದ ಬೆಳಕನ್ನು
ಓಡಿಸಬೇಕು ಯಾಕೆ?
ನಮ್ಮ ದೀಪಗಳು ನಾವೆ-ಪರಸ್ಪರ
ಬೆಳಗುವವರೆಗೆ

ಅಲ್ಲಿದೆ ಈ ಸಂಜೆಯ ವಿಜೃಂಭಣೆಯಲ್ಲಿ
ಎಷ್ಟೊಂದು ದಿವ್ಯ ಮನುಷ್ಯರ ಮುಖ!
ಅಹ! ಏನದು ಕೇಳಿಸಿದ ಸದ್ದು?
ಏನಿಲ್ಲ, ಕಿಟಕಿ ಗಾಜಿನ ಮೇಲೆ ಬಿದ್ದ
ಆಕಸ್ಮಿಕ ಹನಿಯದ್ದು
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...