ನಾಯಿ ಹಾಗೂ ನಾಯಿಯ ಗೊಂಬೆ

ಒಂದನ್ನೊಂದು ಅಣಕಿಸುವಂತಿವೆ ಅವು!
ಅದೇ ಮೈ ಅದೇ ಬಣ್ಣ ಅದೇ ನಿಲುವು
ಅದೇ ಬಾಲದ ಅದೇ ಡೊಂಕು
ಕಣ್ಣುಗಳಲ್ಲೂ ಅದೇ ಕವಿದ ಮಂಕು

ಆದರೆ-ತಿಂಗಳು ನೆತ್ತಿಯ ಮೇಲೆ ಎದ್ದು
ತೆಂಗಿನ ಸೋಗೆಗಳಲ್ಲಿ ಆದಾಗ ಸದ್ದು
ಒ೦ದು ಭಯದಿಂದ ಹುಯ್ಯಲಿಡುತ್ತದೆ
ಇನ್ನೊಂದು ಮಾತ್ರ ಸುಮ್ಮನಿರುತ್ತದೆ

ಅಥವ -ಧಾವಿಸಿ ಒಮ್ಮೆಲೆ ಬಿಸಿರಕ್ತದ ಹುರುಪು
ಆಗಿ ತನ್ನ ಒಂಟಿತನದ ನೆನಪು
ಒಂದು ಅಯ್ಯೋ ಎಂದು ಮೊರೆಯಿಡುತ್ತದೆ
ಇನ್ನೊಂದು ಮಾತ್ರ ಗಂಭೀರವಾಗಿರುತ್ತದೆ

ಅಥವ-ಮೈ ಕೊರೆವ ಮಾಗಿಯ ಚಳಿಗೆ
ಸಾಯುತ್ತಿರಲು ಗತಿಯಿರದೆ ಹೊಟ್ಟೆ ಬಟ್ಟೆಗೆ
ಒಂದು ಸತ್ತೇ ಎಂದು ಕೂಗಾಡುತ್ತದೆ
ಇನ್ನೊಂದು ಮಾತ್ರ ನಿಶ್ಚಲವಾಗಿರುತ್ತದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಪವ್ಯಯ
Next post ಪ್ರಚಾರ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…