ಕವಿತೆ: ಶಾಂತಿನಾಥ ದೇಸಾಯಿ ಅವರಿಗೆ

ನೆನಪಿಸಿಕೊಳ್ಳಿ ರೆಡಿಂಗ್‌ನಿಂದ ಬ್ರೌಟನ್‌ವರೆಗಿನ
ನಮ್ಮ ಯಾತ್ರೆಯನ್ನು. ಇಂಗ್ಲೆಂಡ್ ಮುಗಿದು
ವೇಲ್ಸ್ ಮೊದಲಾಗುತ್ತಲೆ ಬದಲಾದ ಹವೆಯನ್ನು.

ಬ್ರೌಟನ್ ಪಬ್ಬಿನಲ್ಲಿ ಸಂಜೆ ಕೈಗೊಂಡ
ಮದ್ಯಪಾನ–ತಟಕ್ಕನೆ ಆರಂಭವಾದ
ಬ್ಯಾಂಡಿಗೆ ತಾಳ ಹಾಕುತ್ತ ನೀವು ಕಳೆದ

ಪ್ರಣಯಗಳ ಬಗ್ಗೆ ಮಾತಾಡುತ್ತ ಕರಗಿದ್ದನ್ನು.
ಆಚೆಗೆ ಕುಳಿತಿದ್ದಾಕೆ ಇನ್ನೊಂದು ಬದಿಯಿಂದ
ಹೇಗೆ ಕಾಣಿಸುತ್ತಿದ್ದಾಳೆಂದು ನೋಡಲು

ಬೇಕೆಂದೆ ಮತ್ತೆ ಮತ್ತೆ ನಾನು
ಬೀಯರ್ ಕೊಳ್ಳಲು ಎದ್ದು ಹೋದುದನ್ನು.
ನೆನಪಿಸಿಕೊಳ್ಳಿ ಮತ್ತೆ ನಮ್ಮ ಚೆಸ್ಟರ್ ಸಂಚಾರ-

ಡೀ ನದಿಯ ಮೇಲೆ ವಿಹಾರ-ಬೋಟಿನ ತುಂಬ ಜನ
ಹೆಂಗಸರು ಗಂಡಸರು ಅನೇಕ ಮೂಡುಗಳಲ್ಲಿ
ಬೇಸಿಗೆಯ ಕನಿಷ್ಟ ಉಡುಪುಗಳಲ್ಲಿ

ಅಂಥ ಯಾವಳೋ ಹೆಂಗಸಿನ ದೃಶ್ಯಗಳನ್ನು
ಕ್ಯಾಮರಾದಲ್ಲಿ ನೀವು ಹಿಡಿಯಲು ಯತ್ನಿಸಿ
ಸೋತುದನ್ನು-ಅದರೆ ಕಣ್ಣಿನಲ್ಲಿ ಖಂಡಿತ ಅಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲನ ಕರೆ
Next post ವಕ್ರದೃಷ್ಟಿ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…