ಕವಿತೆ: ಶಾಂತಿನಾಥ ದೇಸಾಯಿ ಅವರಿಗೆ

ನೆನಪಿಸಿಕೊಳ್ಳಿ ರೆಡಿಂಗ್‌ನಿಂದ ಬ್ರೌಟನ್‌ವರೆಗಿನ
ನಮ್ಮ ಯಾತ್ರೆಯನ್ನು. ಇಂಗ್ಲೆಂಡ್ ಮುಗಿದು
ವೇಲ್ಸ್ ಮೊದಲಾಗುತ್ತಲೆ ಬದಲಾದ ಹವೆಯನ್ನು.

ಬ್ರೌಟನ್ ಪಬ್ಬಿನಲ್ಲಿ ಸಂಜೆ ಕೈಗೊಂಡ
ಮದ್ಯಪಾನ–ತಟಕ್ಕನೆ ಆರಂಭವಾದ
ಬ್ಯಾಂಡಿಗೆ ತಾಳ ಹಾಕುತ್ತ ನೀವು ಕಳೆದ

ಪ್ರಣಯಗಳ ಬಗ್ಗೆ ಮಾತಾಡುತ್ತ ಕರಗಿದ್ದನ್ನು.
ಆಚೆಗೆ ಕುಳಿತಿದ್ದಾಕೆ ಇನ್ನೊಂದು ಬದಿಯಿಂದ
ಹೇಗೆ ಕಾಣಿಸುತ್ತಿದ್ದಾಳೆಂದು ನೋಡಲು

ಬೇಕೆಂದೆ ಮತ್ತೆ ಮತ್ತೆ ನಾನು
ಬೀಯರ್ ಕೊಳ್ಳಲು ಎದ್ದು ಹೋದುದನ್ನು.
ನೆನಪಿಸಿಕೊಳ್ಳಿ ಮತ್ತೆ ನಮ್ಮ ಚೆಸ್ಟರ್ ಸಂಚಾರ-

ಡೀ ನದಿಯ ಮೇಲೆ ವಿಹಾರ-ಬೋಟಿನ ತುಂಬ ಜನ
ಹೆಂಗಸರು ಗಂಡಸರು ಅನೇಕ ಮೂಡುಗಳಲ್ಲಿ
ಬೇಸಿಗೆಯ ಕನಿಷ್ಟ ಉಡುಪುಗಳಲ್ಲಿ

ಅಂಥ ಯಾವಳೋ ಹೆಂಗಸಿನ ದೃಶ್ಯಗಳನ್ನು
ಕ್ಯಾಮರಾದಲ್ಲಿ ನೀವು ಹಿಡಿಯಲು ಯತ್ನಿಸಿ
ಸೋತುದನ್ನು-ಅದರೆ ಕಣ್ಣಿನಲ್ಲಿ ಖಂಡಿತ ಅಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲನ ಕರೆ
Next post ವಕ್ರದೃಷ್ಟಿ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…