ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ
ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು
ಕೆತ್ತಿಸಿದ ತನ್ನ ಹೆಸರನ್ನು
ಹೆಸರು ಅಖಿಟೋಪನೆಂದು
ಹೆಬ್ಬಂಡೆಗಳ ಮೇಲೆ
ಮೃತ್ತಿಕೆಗಳ ಮೇಲೆ
ಮರದ ಕಾಂಡಗಳ ಮೇಲೆ
ಬರೆಸಿದ ಪಠ್ಯ ಪುಸ್ತಕಗಳಲ್ಲಿ
ಸೇರಿಸಿದ ಧರ್ಮಗ್ರ೦ಥಗಳಲ್ಲಿ
ಪೂಜಾರಿಗಳ ಮಂತ್ರಗಳಲ್ಲಿ
ಎಲ್ಲೆಲ್ಲು ಅಖಿಟೋಪ ಅಖಿಟೋಪ
ಎಷ್ಟೆಂದರವನ ಕೋಪ
ಕುದುರೆಗಳು ಕೆನೆಯುವುದೂ
ಕಪ್ಪೆಗಳು ವಟಗುಟ್ಟುವುದೂ
ಆದವು ಅಖಿಟೋಪ
ಅಖಿಟೋಪನೆಂದರ ಅಂದಿನ ಭಾಷೆಯಲ್ಲಿ
ಅನೇಕ ಸೂರ್ಯರ ತಾಪ-
ವೆಂದು ಅರ್ಥ

ಆದರೆ ಮೊಂಗೋಲರೆಂಬವರು
ಮಹಾ ನಿರ್ದಯರು
ಅವರು ಮಾಂಸ ಬೇಯಿಸದೆ ತಿನ್ನುತ್ತಿದ್ದರು
ಕಳ್ಳಿನ ಭಾಂಡಿ ಕುಡಿಯುತ್ತಿದ್ದರು
ಕುಡಿದು ಢರ್ರನೆ ತೇಗುತಿದ್ದರು
ದೊಡ್ಡದಾಗಿ ನಗುತಿದ್ದರು
ಅವರು ಚೀನಾ ದೇಶದಿಂದ
ಸಿಡಿಮದ್ದನ್ನು ತಂದರು
ಕುದುರೆಗಳ ಮೇಲೆ ಬಂದರು

ಸಂತೆಗೆಂದು ಹೋದ ದೋಣಿಗಳು
ಸಂಜೆಯಾದರೂ ಮರಳಲಿಲ್ಲ
ನಗರದ ಬಾಗಿಲುಗಳು
ಹೊತ್ತಿಗೆ ಮೊದಲೇ ಮುಚ್ಚಿದುವು
ದೀಪಗಳೂ ಆರಿದುವು
ಯಾವಾಗಲೂ ಹಾಡುತಿದ್ದವರು
ಯಾಕೆ ಹಾಡಲಿಲ್ಲ?
ಮತ್ತೆ ಬೆಳಗಾಯಿತು?
ವರ್ಷಗಳು ಉರುಳಿದುವೆ?
ಯಾರಾದರೂ ಸುದ್ದಿಯನು ತಂದರೆ?
ಮೆಸಪೊಟೇಮಿಯಾ!
ಹರಿವ ನೀರಿನಲಿ
ಕೆತ್ತಿರುವುದೆ ಚರಿತ್ರೆ?
ಹೇಳೀಗ ನಮ್ಮ ಮೆಚ್ಚಿನ ಅಖಿಟೋಪನೆಲ್ಲಿ?
ಎಲ್ಲಿ ಆ ಮಂತ್ರಗಳು
ಹೆಸರು ಬರೆಸಿದ ಗ್ರಂಥಗಳು
ಎಲ್ಲಿ ಕುದುರೆಗಳು ಎಲ್ಲಿ ಕಪ್ಪೆಗಳು
ಎಲ್ಲಿ ಆ ಹೆಬ್ಬಂಡೆ
ಸಿಡಿದ ನದಿ ದಂಡೆ
ಅನೇಕ ಸೂರ್ಯರ ತಾಪ
ಅಖಿಟೋಪ
ಯಾವ ಸಮುದ್ರದಲಿ ಬಿದ್ದ
ಹೇಳು ಮೆಸಪೊಟೇಮಿಯಾ
ಅಂಥ ಪತನಕ್ಕೆ
ಇಂಥ ಸಾಲುಗಳು ಸಾಕೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೌಣ
Next post ಮೌಲ್ಯ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys