Home / ಕವನ / ಕವಿತೆ / ಅಖಿಟೋಪ

ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ
ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು
ಕೆತ್ತಿಸಿದ ತನ್ನ ಹೆಸರನ್ನು
ಹೆಸರು ಅಖಿಟೋಪನೆಂದು
ಹೆಬ್ಬಂಡೆಗಳ ಮೇಲೆ
ಮೃತ್ತಿಕೆಗಳ ಮೇಲೆ
ಮರದ ಕಾಂಡಗಳ ಮೇಲೆ
ಬರೆಸಿದ ಪಠ್ಯ ಪುಸ್ತಕಗಳಲ್ಲಿ
ಸೇರಿಸಿದ ಧರ್ಮಗ್ರ೦ಥಗಳಲ್ಲಿ
ಪೂಜಾರಿಗಳ ಮಂತ್ರಗಳಲ್ಲಿ
ಎಲ್ಲೆಲ್ಲು ಅಖಿಟೋಪ ಅಖಿಟೋಪ
ಎಷ್ಟೆಂದರವನ ಕೋಪ
ಕುದುರೆಗಳು ಕೆನೆಯುವುದೂ
ಕಪ್ಪೆಗಳು ವಟಗುಟ್ಟುವುದೂ
ಆದವು ಅಖಿಟೋಪ
ಅಖಿಟೋಪನೆಂದರ ಅಂದಿನ ಭಾಷೆಯಲ್ಲಿ
ಅನೇಕ ಸೂರ್ಯರ ತಾಪ-
ವೆಂದು ಅರ್ಥ

ಆದರೆ ಮೊಂಗೋಲರೆಂಬವರು
ಮಹಾ ನಿರ್ದಯರು
ಅವರು ಮಾಂಸ ಬೇಯಿಸದೆ ತಿನ್ನುತ್ತಿದ್ದರು
ಕಳ್ಳಿನ ಭಾಂಡಿ ಕುಡಿಯುತ್ತಿದ್ದರು
ಕುಡಿದು ಢರ್ರನೆ ತೇಗುತಿದ್ದರು
ದೊಡ್ಡದಾಗಿ ನಗುತಿದ್ದರು
ಅವರು ಚೀನಾ ದೇಶದಿಂದ
ಸಿಡಿಮದ್ದನ್ನು ತಂದರು
ಕುದುರೆಗಳ ಮೇಲೆ ಬಂದರು

ಸಂತೆಗೆಂದು ಹೋದ ದೋಣಿಗಳು
ಸಂಜೆಯಾದರೂ ಮರಳಲಿಲ್ಲ
ನಗರದ ಬಾಗಿಲುಗಳು
ಹೊತ್ತಿಗೆ ಮೊದಲೇ ಮುಚ್ಚಿದುವು
ದೀಪಗಳೂ ಆರಿದುವು
ಯಾವಾಗಲೂ ಹಾಡುತಿದ್ದವರು
ಯಾಕೆ ಹಾಡಲಿಲ್ಲ?
ಮತ್ತೆ ಬೆಳಗಾಯಿತು?
ವರ್ಷಗಳು ಉರುಳಿದುವೆ?
ಯಾರಾದರೂ ಸುದ್ದಿಯನು ತಂದರೆ?
ಮೆಸಪೊಟೇಮಿಯಾ!
ಹರಿವ ನೀರಿನಲಿ
ಕೆತ್ತಿರುವುದೆ ಚರಿತ್ರೆ?
ಹೇಳೀಗ ನಮ್ಮ ಮೆಚ್ಚಿನ ಅಖಿಟೋಪನೆಲ್ಲಿ?
ಎಲ್ಲಿ ಆ ಮಂತ್ರಗಳು
ಹೆಸರು ಬರೆಸಿದ ಗ್ರಂಥಗಳು
ಎಲ್ಲಿ ಕುದುರೆಗಳು ಎಲ್ಲಿ ಕಪ್ಪೆಗಳು
ಎಲ್ಲಿ ಆ ಹೆಬ್ಬಂಡೆ
ಸಿಡಿದ ನದಿ ದಂಡೆ
ಅನೇಕ ಸೂರ್ಯರ ತಾಪ
ಅಖಿಟೋಪ
ಯಾವ ಸಮುದ್ರದಲಿ ಬಿದ್ದ
ಹೇಳು ಮೆಸಪೊಟೇಮಿಯಾ
ಅಂಥ ಪತನಕ್ಕೆ
ಇಂಥ ಸಾಲುಗಳು ಸಾಕೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...