Home / ಕವನ / ಕವಿತೆ / ತುತಂಖಮನ್

ತುತಂಖಮನ್

ಲಕ್ಸರಿನ ಬೀದಿಯಲ್ಲಿ
ಪೋಲೀಸರು ಒಬ್ಬ ಕಳ್ಳನನ್ನು
ಬಿಡದೇ ಮರ್ದಿಸುತ್ತಿದ್ದಾರೆ
ಅವನ ದವಡೆ ಒಡೆದು
ರಕ್ತ ನಿರಂತರ ಸೋರುತ್ತಿದೆ.

ಕೈರೊದ ಕ್ಲಬ್ಬಿನಲ್ಲಿ ಒಬ್ಬಾಕೆ
ಎಲ್ಲರನ್ನೂ ಕೇಳುತ್ತಿದ್ದಾಳೆ:
ಹಿಂದಾದುದನ್ನು ನಾನು ಕಂಡಿದ್ದೇನೆ
ಮುಂದಾಗುವುದು ನನಗೆ ಗೊತ್ತು-
ಹಾಗಂದರೇನು?

ಚರಿತ್ರೆಯ ಏಕಾಂತವನ್ನು ಮುರಿದವರು
ಮಾತಿಗೆ ಹೊಣೆಯಾಗುವರು
ಆದರೆ ಚರಿತ್ರೆ ಯಾರಿಗೂ ಹೊಣೆಯಲ್ಲ.

ಇಲ್ಲಿ ಹಿಂದೆ ಸೂರ್ಯನು
ದೇವರಾಗಿದ್ದ ಎಂದು ಹೇಳುತ್ತಾರೆ-
ಈ ಕಠಿಣ ಶಿಲೆಗಳಿಗೆ ಅಲ್ಲದಿದ್ದರೆ
ಇನ್ನೇನರ್ಥ- ?
ಆತನ ಚಿನ್ನದ ಕಣ್ಣುಗಳ ಮೇಲಿಂದ
ನೈಲ್ ನದಿಯ ನೆರೆ ನೀರು
ಅನೇಕ ಬಾರಿ
ಹರಿದು ಹೋಯಿತು.

ನಿಮಗೆ ಭೂತ ಪ್ರೇತಗಳಲ್ಲಿ
ಸದಾಚಾರದಲ್ಲಿ ಆತ್ಮದ
ಅಭಿಮಾನದಲ್ಲಿ ಪರಲೋಕದ
ನದೀತೀರಗಳಲ್ಲಿ ಹಾಗೂ
ಸತ್ತವರ ಶಾಪಗಳಲ್ಲಿ
ನಂಬಿಕೆಯಿಂದೆಯೇ?

ನಿಜ-
ವಿಷಯ ತುತಂಖಮನ್: ನಾನು ಮರೆತಿಲ್ಲ
ನನ್ನ ಮಾತುಗಳು ತಡವಿದರೆ
ಕ್ಷಮೆಯಿರಲಿ!
ನಿಮ್ಮ ಮುಖದಲ್ಲಿ ನನಗೆ
ನನ್ನ ಹಿಂದೆ ನಿಂತವರು
ಕಾಣಿಸುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...