ಥೆಮ್ಸ್ ನದಿಯ ಮೇಲೆ

(ಕಾರ್ಮೆನ್‌ಗೆ)

ಹೆನ್ಲಿಯೆಂಬುದೊಂದು ಹಳ್ಳಿ ಅಲ್ಲಿ
ಥೆಮ್ಸ್ ನದಿಗೆ ಅಪರೂಪದ ಭರ
ನದಿಯ ಮಧ್ಯದ ತನಕ ಹಾಕಿದ
ಮರದ ಸೇತುವೆಯಲ್ಲಿ
ನಾವು ನಡೆದವು.
ರೊಟ್ಟಿಯ ತುಣುಕಿಗೆ ಅಥವಾ
ಸೇಬಿನ ತಿರುಳಿಗೆ ಬಾತುಕೋಳಿಗಳು
ಹತ್ತಿರಕ್ಕೆ ಬರುತ್ತಿದ್ದುವು
ನೋಡುತ್ತ ನಿಂತೆವು.

ಆಕಡೆ ಗುಡ್ಡ ಕಾಡು-ಸೂಜಿ ಮೊನೆಯ
ಮರಗಳು, ಮೌನ ಮಂಜು
ಈಚೆ ದಡದ ಮೇಲೆ
ಮೋಜಿಗೆಂದು ವಿರಾಮ ಹಿಡಿಯಲು ಕುಳಿತವರು
ಒಬ್ಬೊಬ್ಬನ ಪಕ್ಕದಲ್ಲೂ
ಒಂದೊಂದು ಬುಟ್ಟಿ ಹುಳಗಳು

ಈ ಸೇತುವೆ, ಈ ನೀರು, ಇಲ್ಲಿ ಈ ನಿಮಿಷ
ಒಟ್ಟಿಗೆ ಬಂದು ನಿಂತ ಈ ನಾವು
ಇದೆಲ್ಲ ಇನ್ನೊಂದು ಕಾಲದ ಇನ್ನೊಂದು ದಿನದ
ಆವರ್ತನೆಯೆ ಅಥವ
ಬೇರೆಯ ದಿನವೆ?

ತೇಲಿ ಹೋಗುತ್ತಿರುವ ಆ
ಖಾಲಿ ಬೀಯರು ಡಬ್ಬದ ಹಾಗೆ
ಕೆಳಗಿನ ಇಳುಕಲಿನಲ್ಲಿ ಮರೆಯಾದರೆ
ಎಷ್ಟು ಖುಷಿ!
–ಎಂದಳು ಅವಳು

ಹಿಂದೆ ಬರುತ್ತಿದ್ದಾಗಲೇ ನಾವು ಗಮನಿಸಿದ್ದು
ಮಾಸಿದ ಅಕ್ಷರಗಳ ನೋಟಿಸು-
ಪ್ರವಾಸಿಗಳು ತಮ್ಮ ರಕ್ಷಣೆಗೆ
ತಾವೇ ಜವಾಬ್ದಾರರು-ಎಂದು.

ರೆವರೆಂಡ್ ಜೋನ್ಸ್–
ಈಗಿಲ್ಲಿದ ಜೋನ್ಸ್ ಟೌನಿನ ಪೂಜಾರಿ-
ಆತ ಕುಳಿತ್ತಿದ್ದ ವೇದಿಕೆಯ ಮೇಲೆ
ಬರೆದಿತ್ತಂತೆ:
“ಹಿಂದಿನದನ್ನು ಯಾರು ಮರೆಯುತ್ತಾರೋ
ಅವರು ಅದನ್ನೇ ಮತ್ತೆ ಮತ್ತೆ
ಆವರ್ತಿಸುವುದಕ್ಕೆ ಗುರಿಯಾಗುತ್ತಾರೆ.”

ಅವು ಸಾಂತಾಯನನ ಮಾತುಗಳಲ್ಲವೆ
ಏನದರ ಅರ್ಥ?

ಯಾರಿಗೆ ಗೊತ್ತು, ಕಾರ್ಮೆನ್,
ಆ ಎಂಟುನೂರ ಹನ್ನೊಂದು ಮಂದಿಯಲ್ಲಿ
ಯಾರೂ ಉಳಿಯಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗುಚಲಾಗದ ಹಾಳೆ
Next post ನೂರಕ್ಕೆ ನೂರು

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…