Home / ಕವನ / ಕವಿತೆ / ಥೆಮ್ಸ್ ನದಿಯ ಮೇಲೆ

ಥೆಮ್ಸ್ ನದಿಯ ಮೇಲೆ

(ಕಾರ್ಮೆನ್‌ಗೆ)

ಹೆನ್ಲಿಯೆಂಬುದೊಂದು ಹಳ್ಳಿ ಅಲ್ಲಿ
ಥೆಮ್ಸ್ ನದಿಗೆ ಅಪರೂಪದ ಭರ
ನದಿಯ ಮಧ್ಯದ ತನಕ ಹಾಕಿದ
ಮರದ ಸೇತುವೆಯಲ್ಲಿ
ನಾವು ನಡೆದವು.
ರೊಟ್ಟಿಯ ತುಣುಕಿಗೆ ಅಥವಾ
ಸೇಬಿನ ತಿರುಳಿಗೆ ಬಾತುಕೋಳಿಗಳು
ಹತ್ತಿರಕ್ಕೆ ಬರುತ್ತಿದ್ದುವು
ನೋಡುತ್ತ ನಿಂತೆವು.

ಆಕಡೆ ಗುಡ್ಡ ಕಾಡು-ಸೂಜಿ ಮೊನೆಯ
ಮರಗಳು, ಮೌನ ಮಂಜು
ಈಚೆ ದಡದ ಮೇಲೆ
ಮೋಜಿಗೆಂದು ವಿರಾಮ ಹಿಡಿಯಲು ಕುಳಿತವರು
ಒಬ್ಬೊಬ್ಬನ ಪಕ್ಕದಲ್ಲೂ
ಒಂದೊಂದು ಬುಟ್ಟಿ ಹುಳಗಳು

ಈ ಸೇತುವೆ, ಈ ನೀರು, ಇಲ್ಲಿ ಈ ನಿಮಿಷ
ಒಟ್ಟಿಗೆ ಬಂದು ನಿಂತ ಈ ನಾವು
ಇದೆಲ್ಲ ಇನ್ನೊಂದು ಕಾಲದ ಇನ್ನೊಂದು ದಿನದ
ಆವರ್ತನೆಯೆ ಅಥವ
ಬೇರೆಯ ದಿನವೆ?

ತೇಲಿ ಹೋಗುತ್ತಿರುವ ಆ
ಖಾಲಿ ಬೀಯರು ಡಬ್ಬದ ಹಾಗೆ
ಕೆಳಗಿನ ಇಳುಕಲಿನಲ್ಲಿ ಮರೆಯಾದರೆ
ಎಷ್ಟು ಖುಷಿ!
–ಎಂದಳು ಅವಳು

ಹಿಂದೆ ಬರುತ್ತಿದ್ದಾಗಲೇ ನಾವು ಗಮನಿಸಿದ್ದು
ಮಾಸಿದ ಅಕ್ಷರಗಳ ನೋಟಿಸು-
ಪ್ರವಾಸಿಗಳು ತಮ್ಮ ರಕ್ಷಣೆಗೆ
ತಾವೇ ಜವಾಬ್ದಾರರು-ಎಂದು.

ರೆವರೆಂಡ್ ಜೋನ್ಸ್–
ಈಗಿಲ್ಲಿದ ಜೋನ್ಸ್ ಟೌನಿನ ಪೂಜಾರಿ-
ಆತ ಕುಳಿತ್ತಿದ್ದ ವೇದಿಕೆಯ ಮೇಲೆ
ಬರೆದಿತ್ತಂತೆ:
“ಹಿಂದಿನದನ್ನು ಯಾರು ಮರೆಯುತ್ತಾರೋ
ಅವರು ಅದನ್ನೇ ಮತ್ತೆ ಮತ್ತೆ
ಆವರ್ತಿಸುವುದಕ್ಕೆ ಗುರಿಯಾಗುತ್ತಾರೆ.”

ಅವು ಸಾಂತಾಯನನ ಮಾತುಗಳಲ್ಲವೆ
ಏನದರ ಅರ್ಥ?

ಯಾರಿಗೆ ಗೊತ್ತು, ಕಾರ್ಮೆನ್,
ಆ ಎಂಟುನೂರ ಹನ್ನೊಂದು ಮಂದಿಯಲ್ಲಿ
ಯಾರೂ ಉಳಿಯಲಿಲ್ಲ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...