ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಬಸ್ಸು ಸುರಂಗಮಾರ್ಗ ಬಾರು ಕೆಫೆಟೇರಿಯಾ
ವಿಂಬಲ್ಡನ್ ಪಂದ್ಯ ಸೂಪರ್ ಬಜಾರುಗಳಲ್ಲಿ
ನಿಮ್ಮ ಅಕ್ಕಪಕ್ಕ ನಿಂತವರನ್ನೇ ಸಂದೇಹಿಸುವ ಕಾಲ!
ಮುಂದೆ ನೋಡುವಿರ ಹಿಂದೆ ನೋಡುವಿರ
ಮನುಷ್ಯನಿಗಿರುವುದು ಎರಡೇ ಕಣ್ಣುಗಳು
ಕಛೇರಿಗೆ ಹೋದವರು ಹಿಂದೆ ಬರುತ್ತಾರೆಯೆ
ಬಂದರೂ ಅವರ ಕೈಕಾಲುಗಳು ಹಾಗೆಯೇ ಇರುತ್ತವೆಯೇ ?

ಉತ್ತರ ಅಯರ್ಲೆಂಡಿನಲ್ಲಿ ಏನಾಗುತ್ತಿದೆ?
ಆರ್ಜೆಂಟೇನಾದಲ್ಲಿ ನಿಕರಾಗುವಾದಲ್ಲಿ
ಇಲ್ಲಿ ಲಂಡನ್ನಲ್ಲಿ! ಜನ ಬದುಕಬೇಕೆ ಬೇಡವೆ?
ಕ್ರಾಂತಿಯನ್ನುವುದೀಗ ಅಂಗಡಿಯಲ್ಲಿ ಸಿಗುವ
ವಸ್ತುವಾಗಿಬಿಟ್ಟಿದೆ! ಸೆಲೋಫೇನ್ ಚೀಲಗಳಲ್ಲಿ
ಯಾರು ಬೇಕಾದರೂ ಕೊಳ್ಳಬಹುದು ಹತ್ತು,
ಪೌಂಡುಗಳಿಗೆ! “ಖಾಲಿ ಚೀಲಗಳನ್ನು ಮಾತ್ರ
ನಾಶಪಡಿಸಿರಿ, ಮಕ್ಕಳ ಕೈಗೆ ದೊರಕುವ ಕಡೆ
ಒಗೆಯಬೇಡಿರಿ!”- ಎನ್ನುತ್ತದೆ ಅದರ ಮೇಲಿನ
ಪ್ರಕಟಣೆ. ಆದರೆ ಚೀಲದೂಳಗಿನ ವಸ್ತು?
ಅದಕ್ಕೆ ಯಾರ ಲಂಗು ಲಗಾಮು ಸ್ವಾಮಿ? ಯಾವ
ಸರಕಾರೀ ನಿಯಂತ್ರಣ? ಅದು ಆಫ್ರಿಕೆಗೂ ಸಿದ್ಧ
ಲ್ಯಾಟಿನ್ ಅಮೇರಿಕೆಗೂ ಸಿದ್ಧ! ಮತ್ತೆ ಹೊಸ
ರೋಗಗಳ ಸೋಂಕು ತಗಲಿಸುತ್ತದೆ ನಮ್ಮ
ನಿಲಯದ ಬುದ್ದಿ ಜೀವಿಗಳಿಗೆ!

ಅವರೋ! ಹಾ! ಅವರ ಬಗ್ಗೆ ಎಷ್ಟು ಹೇಳಿದರೂ
ಕಡಿಮೆಯೆ! ಅವರು ಸಿಗರೇಟಿನ ಬೆಲೆಯಿಂದ
ಹಿಡಿದು ಅಣ್ವಸ್ತ್ರಗಳ ಬೆಲೆಯ ತನಕ ಎಲ್ಲವನ್ನೂ
ತಿಳಿದವರಂತೆ ಮಾತಾಡುತ್ತಾರೆ. ತಮ್ಮ ಪಕ್ಕದಲ್ಲೇ
ಬಾಂಬು ಸಿಡಿದರೂ ಕೇಳಿಸದಂತೆ ಸಾಕ್ರಟೀಸನ
ಶೈಲಿಯಲ್ಲಿ ಚರ್ಚಿಸುತ್ತಾರೆ! ಎಂಥ ಸಮಾಜ!

ನನಗೆ ಹೇಳುವುದಕ್ಕೆ ಬಹಳಷ್ಟಿದೆ-ಆದರೆ
ನೀವು ನಿಮ್ಮ ನಿಮ್ಮ ಮನೆಗಳಿಗೆ ಹೋಗಲು
ಆತುರದಿಂದಿದ್ದೀರಿ. ಸದ್ಯ ನಿಲ್ಲಿಸುವೆ. ನಾಳೆ
ಇಲ್ಲೇ ನಮ್ಮ ಭೇಟಿ. ಆದರೆ ಜಾಗ್ರತೆ!
ನಿಮ್ಮ ಕಾರಿನ ಬಾಗಿಲು ತೆಗೆಯುವ ಮೊದಲು
ಎರಡೆರಡು ಬಾರಿ ನೋಡಿಕೊಳ್ಳಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಸಲು ಸೀರೆ
Next post ಚಿಂತೆ – ನಿಶ್ಚಿಂತೆ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…