Home / ಕವನ / ಕವಿತೆ / ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಬಸ್ಸು ಸುರಂಗಮಾರ್ಗ ಬಾರು ಕೆಫೆಟೇರಿಯಾ
ವಿಂಬಲ್ಡನ್ ಪಂದ್ಯ ಸೂಪರ್ ಬಜಾರುಗಳಲ್ಲಿ
ನಿಮ್ಮ ಅಕ್ಕಪಕ್ಕ ನಿಂತವರನ್ನೇ ಸಂದೇಹಿಸುವ ಕಾಲ!
ಮುಂದೆ ನೋಡುವಿರ ಹಿಂದೆ ನೋಡುವಿರ
ಮನುಷ್ಯನಿಗಿರುವುದು ಎರಡೇ ಕಣ್ಣುಗಳು
ಕಛೇರಿಗೆ ಹೋದವರು ಹಿಂದೆ ಬರುತ್ತಾರೆಯೆ
ಬಂದರೂ ಅವರ ಕೈಕಾಲುಗಳು ಹಾಗೆಯೇ ಇರುತ್ತವೆಯೇ ?

ಉತ್ತರ ಅಯರ್ಲೆಂಡಿನಲ್ಲಿ ಏನಾಗುತ್ತಿದೆ?
ಆರ್ಜೆಂಟೇನಾದಲ್ಲಿ ನಿಕರಾಗುವಾದಲ್ಲಿ
ಇಲ್ಲಿ ಲಂಡನ್ನಲ್ಲಿ! ಜನ ಬದುಕಬೇಕೆ ಬೇಡವೆ?
ಕ್ರಾಂತಿಯನ್ನುವುದೀಗ ಅಂಗಡಿಯಲ್ಲಿ ಸಿಗುವ
ವಸ್ತುವಾಗಿಬಿಟ್ಟಿದೆ! ಸೆಲೋಫೇನ್ ಚೀಲಗಳಲ್ಲಿ
ಯಾರು ಬೇಕಾದರೂ ಕೊಳ್ಳಬಹುದು ಹತ್ತು,
ಪೌಂಡುಗಳಿಗೆ! “ಖಾಲಿ ಚೀಲಗಳನ್ನು ಮಾತ್ರ
ನಾಶಪಡಿಸಿರಿ, ಮಕ್ಕಳ ಕೈಗೆ ದೊರಕುವ ಕಡೆ
ಒಗೆಯಬೇಡಿರಿ!”- ಎನ್ನುತ್ತದೆ ಅದರ ಮೇಲಿನ
ಪ್ರಕಟಣೆ. ಆದರೆ ಚೀಲದೂಳಗಿನ ವಸ್ತು?
ಅದಕ್ಕೆ ಯಾರ ಲಂಗು ಲಗಾಮು ಸ್ವಾಮಿ? ಯಾವ
ಸರಕಾರೀ ನಿಯಂತ್ರಣ? ಅದು ಆಫ್ರಿಕೆಗೂ ಸಿದ್ಧ
ಲ್ಯಾಟಿನ್ ಅಮೇರಿಕೆಗೂ ಸಿದ್ಧ! ಮತ್ತೆ ಹೊಸ
ರೋಗಗಳ ಸೋಂಕು ತಗಲಿಸುತ್ತದೆ ನಮ್ಮ
ನಿಲಯದ ಬುದ್ದಿ ಜೀವಿಗಳಿಗೆ!

ಅವರೋ! ಹಾ! ಅವರ ಬಗ್ಗೆ ಎಷ್ಟು ಹೇಳಿದರೂ
ಕಡಿಮೆಯೆ! ಅವರು ಸಿಗರೇಟಿನ ಬೆಲೆಯಿಂದ
ಹಿಡಿದು ಅಣ್ವಸ್ತ್ರಗಳ ಬೆಲೆಯ ತನಕ ಎಲ್ಲವನ್ನೂ
ತಿಳಿದವರಂತೆ ಮಾತಾಡುತ್ತಾರೆ. ತಮ್ಮ ಪಕ್ಕದಲ್ಲೇ
ಬಾಂಬು ಸಿಡಿದರೂ ಕೇಳಿಸದಂತೆ ಸಾಕ್ರಟೀಸನ
ಶೈಲಿಯಲ್ಲಿ ಚರ್ಚಿಸುತ್ತಾರೆ! ಎಂಥ ಸಮಾಜ!

ನನಗೆ ಹೇಳುವುದಕ್ಕೆ ಬಹಳಷ್ಟಿದೆ-ಆದರೆ
ನೀವು ನಿಮ್ಮ ನಿಮ್ಮ ಮನೆಗಳಿಗೆ ಹೋಗಲು
ಆತುರದಿಂದಿದ್ದೀರಿ. ಸದ್ಯ ನಿಲ್ಲಿಸುವೆ. ನಾಳೆ
ಇಲ್ಲೇ ನಮ್ಮ ಭೇಟಿ. ಆದರೆ ಜಾಗ್ರತೆ!
ನಿಮ್ಮ ಕಾರಿನ ಬಾಗಿಲು ತೆಗೆಯುವ ಮೊದಲು
ಎರಡೆರಡು ಬಾರಿ ನೋಡಿಕೊಳ್ಳಿ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...