ಹೈಡ್ ಪಾರ್ಕಿನಲ್ಲಿ ಭಯೋತ್ಪಾದಕರ ವಿರುದ್ಧ

ಬಸ್ಸು ಸುರಂಗಮಾರ್ಗ ಬಾರು ಕೆಫೆಟೇರಿಯಾ
ವಿಂಬಲ್ಡನ್ ಪಂದ್ಯ ಸೂಪರ್ ಬಜಾರುಗಳಲ್ಲಿ
ನಿಮ್ಮ ಅಕ್ಕಪಕ್ಕ ನಿಂತವರನ್ನೇ ಸಂದೇಹಿಸುವ ಕಾಲ!
ಮುಂದೆ ನೋಡುವಿರ ಹಿಂದೆ ನೋಡುವಿರ
ಮನುಷ್ಯನಿಗಿರುವುದು ಎರಡೇ ಕಣ್ಣುಗಳು
ಕಛೇರಿಗೆ ಹೋದವರು ಹಿಂದೆ ಬರುತ್ತಾರೆಯೆ
ಬಂದರೂ ಅವರ ಕೈಕಾಲುಗಳು ಹಾಗೆಯೇ ಇರುತ್ತವೆಯೇ ?

ಉತ್ತರ ಅಯರ್ಲೆಂಡಿನಲ್ಲಿ ಏನಾಗುತ್ತಿದೆ?
ಆರ್ಜೆಂಟೇನಾದಲ್ಲಿ ನಿಕರಾಗುವಾದಲ್ಲಿ
ಇಲ್ಲಿ ಲಂಡನ್ನಲ್ಲಿ! ಜನ ಬದುಕಬೇಕೆ ಬೇಡವೆ?
ಕ್ರಾಂತಿಯನ್ನುವುದೀಗ ಅಂಗಡಿಯಲ್ಲಿ ಸಿಗುವ
ವಸ್ತುವಾಗಿಬಿಟ್ಟಿದೆ! ಸೆಲೋಫೇನ್ ಚೀಲಗಳಲ್ಲಿ
ಯಾರು ಬೇಕಾದರೂ ಕೊಳ್ಳಬಹುದು ಹತ್ತು,
ಪೌಂಡುಗಳಿಗೆ! “ಖಾಲಿ ಚೀಲಗಳನ್ನು ಮಾತ್ರ
ನಾಶಪಡಿಸಿರಿ, ಮಕ್ಕಳ ಕೈಗೆ ದೊರಕುವ ಕಡೆ
ಒಗೆಯಬೇಡಿರಿ!”- ಎನ್ನುತ್ತದೆ ಅದರ ಮೇಲಿನ
ಪ್ರಕಟಣೆ. ಆದರೆ ಚೀಲದೂಳಗಿನ ವಸ್ತು?
ಅದಕ್ಕೆ ಯಾರ ಲಂಗು ಲಗಾಮು ಸ್ವಾಮಿ? ಯಾವ
ಸರಕಾರೀ ನಿಯಂತ್ರಣ? ಅದು ಆಫ್ರಿಕೆಗೂ ಸಿದ್ಧ
ಲ್ಯಾಟಿನ್ ಅಮೇರಿಕೆಗೂ ಸಿದ್ಧ! ಮತ್ತೆ ಹೊಸ
ರೋಗಗಳ ಸೋಂಕು ತಗಲಿಸುತ್ತದೆ ನಮ್ಮ
ನಿಲಯದ ಬುದ್ದಿ ಜೀವಿಗಳಿಗೆ!

ಅವರೋ! ಹಾ! ಅವರ ಬಗ್ಗೆ ಎಷ್ಟು ಹೇಳಿದರೂ
ಕಡಿಮೆಯೆ! ಅವರು ಸಿಗರೇಟಿನ ಬೆಲೆಯಿಂದ
ಹಿಡಿದು ಅಣ್ವಸ್ತ್ರಗಳ ಬೆಲೆಯ ತನಕ ಎಲ್ಲವನ್ನೂ
ತಿಳಿದವರಂತೆ ಮಾತಾಡುತ್ತಾರೆ. ತಮ್ಮ ಪಕ್ಕದಲ್ಲೇ
ಬಾಂಬು ಸಿಡಿದರೂ ಕೇಳಿಸದಂತೆ ಸಾಕ್ರಟೀಸನ
ಶೈಲಿಯಲ್ಲಿ ಚರ್ಚಿಸುತ್ತಾರೆ! ಎಂಥ ಸಮಾಜ!

ನನಗೆ ಹೇಳುವುದಕ್ಕೆ ಬಹಳಷ್ಟಿದೆ-ಆದರೆ
ನೀವು ನಿಮ್ಮ ನಿಮ್ಮ ಮನೆಗಳಿಗೆ ಹೋಗಲು
ಆತುರದಿಂದಿದ್ದೀರಿ. ಸದ್ಯ ನಿಲ್ಲಿಸುವೆ. ನಾಳೆ
ಇಲ್ಲೇ ನಮ್ಮ ಭೇಟಿ. ಆದರೆ ಜಾಗ್ರತೆ!
ನಿಮ್ಮ ಕಾರಿನ ಬಾಗಿಲು ತೆಗೆಯುವ ಮೊದಲು
ಎರಡೆರಡು ಬಾರಿ ನೋಡಿಕೊಳ್ಳಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಸಲು ಸೀರೆ
Next post ಚಿಂತೆ – ನಿಶ್ಚಿಂತೆ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…