ಟ್ರಾನ್ಸಾಲ್ಪಿನೋ

ಅಂಥ ಮಾಂತ್ರಿಕ ಹೆಸರಿದ್ದ ಮೇಲೆ
ಅದು ಬರೇ ಗಾಡಿಯಲ್ಲ ಸಾರೋಟು
ಸಾಗುವುದು ಅಪರಿಚಿತ ಸ್ಥಳಗಳಿಗೆ
ಆ ಅಕ್ಷರಗಳೇ ಹಾಗೆ
ಒಂದನ್ನೊಂದು ಬಳಸುತ್ತ ಬೆಳೆಯುತ್ತ
ಮುಗಿಲ ಕಡೆ ಕೈಚಾಚುತ್ತ
ಹೇಳಿ ಮುಗಿಸುವ ಹೊತ್ತಿಗೆ
ಎಷ್ಟೊಂದು ಬಾರಿ ಎಷ್ಟೊಂದು ಗಾಲಿಗಳು
ಎಷ್ಟು ಹುಲ್ಲುಗಾವಲಿನಲ್ಲಿ
ಎಷ್ಟೊಂದು ಕುರಿಗಳು!

ಮೂಲೆಗೊರಗಿ ಕುಳಿತಿರುವ ಸಹಪ್ರವಾಸಿನಿಗೆ
ಆರೆ ನಿದ್ದೆ-ಅರೆ ಎಚ್ಚರ
ಗಾಲಿಗಳು ಹರಿಯುವ ಲಯಕ್ಕೆ
ತುಸುವೆ ಏರಿಳಿಯುವ ಎದೆ
ಮುಂಗೈಯ ಮೇಲೆ ಮುಂಗೈ-ಆಹಾ !
ಆ ಬೆಟ್ಟಗಳ ಕನಸಿಗೇ
ಹೀಗೆ ಬಸವಳಿದರೆ ಹೇಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದಲಾಗಿದೆ ಕಾಲ
Next post ಮಾರಾಟ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…