Home / ಕವನ / ಕವಿತೆ / ಮಧ್ಯಂತರ ೨: ಕೆಪ್ಲರ್

ಮಧ್ಯಂತರ ೨: ಕೆಪ್ಲರ್

ಮನಸು ಆಕಾಶಗಾಮಿ
ದೇಹವನು ಮಾತ್ರ ಕರೆಯುವುದು ಭೂಮಿ
ಆಹ್! ಯೊಹಾನಸ್ ಕೆಪ್ಲರ್
ಆಕಾಶವನಳೆದವನು ಭೂಮಿಯ
ನೆರಳನಳೆಯುತ್ತಿರುವೆಯ !

ಆ ವಾಕ್ಯಗಳನೆಂತು ಮರೆಯುವುದು
ಆ ಅರ್ಥಗಳನೆಂತು ಬರೆಯುವುದು
ಒಂದು ಹೆಜ್ಜೆಯಲೆ
ಕಲ್ಪಗಳ ದಾಟಿದವನೆ
ಕವಿಯೆ, ವಿಜ್ಞಾನಿಯೆ, ತತ್ವಜ್ಞಾನಿಯೆ
ಎಲ್ಲವನು ಕಂಡವನು ನೀನು
ಕಾಣುವ ಬಗೆ ಹೇಳು

ರೆಕ್ಕೆಗಳುಂಟೆ ಕಲ್ಪನೆಗೆ
ಹಕ್ಕಿಯಾಗಿ ನೆಗೆಯುವುದೆ
ನೋಡನೋಡುತ್ತ ಕೇವಲ
ಚುಕ್ಕೆಯಾಗುವುದೆ
ಸಾಗುವುದೆ ಅದು
ಯಾವ ಅಗೋಚರ ಖಂಡಗಳತ್ತ
ಯಾವ ಅನೂಹ್ಯ ಗೋಲಗಳತ್ತ
ಯಾವ ನಕ್ಷತ್ರಗಳು ಹೊಳೆಯುವತ್ತ
ಯಾವ ಗ್ರಹಗತಿಗೆ ಸಿಕ್ಕಿ
ತಾನೆ ಗ್ರಹವಾಗುವುದೆ
ತಿರುಗುತ್ತ ತನ್ನ ಅಕ್ಷದ ಸುತ್ತ
ಇನ್ನು ಯಾರು ಕೊಡದ ಬೆಳಕ ನೀಡುತ್ತ
ಸುತ್ತಲಾರೆ ದೇಶಗಳ
ದಾಟಲಾರೆ ನನ್ನ ಕಾಲದ ಮಿತಿಗಳ
ಕಾಲು ಕುಸಿಯುವುದು ಮನಸು ಸೋಲುವುದು
ಇನ್ನೆಷ್ಟು ದೂರ?
ಎಲ್ಲ ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು

ಸೂರ್ಯನ ಬಳಿ ಹಾರಿದವನ
ಗತಿಯೇನಾಯಿತು ?-ಎಂದು ಕೇಳಿದರವರು
ರೆಕ್ಕೆಗಳು ಕರಗಿ
ಬಿದ್ದನು ನೆಲಕ್ಕೆ-ಎಂದು ಹೇಳಿದರು
ಬಿದ್ದು ಹೊರಳಾಡಿದನು
ಬೆಂಕಿಯಲಿ ನರಳಿದನು- ಎಂದು ಬಣ್ಣಿಸಿದರು
ಬಿದ್ದವನ ಸಮಾಧಿಯನು
ಬಿಡಲಿಲ್ಲ ಜನರು
ಹಸಿರು ಹುಲ್ಲನು ಕೆದಕಿದರು
ಕಲ್ಲು ಗಾರೆಗಳನು ಕೆಡೆವಿದರು
ಹಿಂದೆ ವಾಕ್ಯಗಳು ಇದ್ದಲ್ಲಿ
ಈಗ ಏನಿಲ್ಲ-ಆಚೀಚೆ
ಚದುರಿ ಬಿದ್ದಿವೆ ಕಲ್ಲುಗಳು
ಅಕ್ಷರಗಳ ಹೆಕ್ಕಿ ಜೋಡಿಸುತ್ತಲೆ ಇರುವೆ
ಅವು ಮೂಡಿಸುವ ವಾಕ್ಯಗಳೇನು
ಅರ್ಥಗಳೇನು
ಹೇಳುವುದು ಹೇಗೆ
ಎಲ್ಲ ಅಕ್ಷರಗಳೂ ಸಿಗುವ ವರೆಗೆ-
ಎಲ್ಲವನು ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...