Home / ಕವನ / ಕವಿತೆ / ಮಧ್ಯಂತರ ೨: ಕೆಪ್ಲರ್

ಮಧ್ಯಂತರ ೨: ಕೆಪ್ಲರ್

ಮನಸು ಆಕಾಶಗಾಮಿ
ದೇಹವನು ಮಾತ್ರ ಕರೆಯುವುದು ಭೂಮಿ
ಆಹ್! ಯೊಹಾನಸ್ ಕೆಪ್ಲರ್
ಆಕಾಶವನಳೆದವನು ಭೂಮಿಯ
ನೆರಳನಳೆಯುತ್ತಿರುವೆಯ !

ಆ ವಾಕ್ಯಗಳನೆಂತು ಮರೆಯುವುದು
ಆ ಅರ್ಥಗಳನೆಂತು ಬರೆಯುವುದು
ಒಂದು ಹೆಜ್ಜೆಯಲೆ
ಕಲ್ಪಗಳ ದಾಟಿದವನೆ
ಕವಿಯೆ, ವಿಜ್ಞಾನಿಯೆ, ತತ್ವಜ್ಞಾನಿಯೆ
ಎಲ್ಲವನು ಕಂಡವನು ನೀನು
ಕಾಣುವ ಬಗೆ ಹೇಳು

ರೆಕ್ಕೆಗಳುಂಟೆ ಕಲ್ಪನೆಗೆ
ಹಕ್ಕಿಯಾಗಿ ನೆಗೆಯುವುದೆ
ನೋಡನೋಡುತ್ತ ಕೇವಲ
ಚುಕ್ಕೆಯಾಗುವುದೆ
ಸಾಗುವುದೆ ಅದು
ಯಾವ ಅಗೋಚರ ಖಂಡಗಳತ್ತ
ಯಾವ ಅನೂಹ್ಯ ಗೋಲಗಳತ್ತ
ಯಾವ ನಕ್ಷತ್ರಗಳು ಹೊಳೆಯುವತ್ತ
ಯಾವ ಗ್ರಹಗತಿಗೆ ಸಿಕ್ಕಿ
ತಾನೆ ಗ್ರಹವಾಗುವುದೆ
ತಿರುಗುತ್ತ ತನ್ನ ಅಕ್ಷದ ಸುತ್ತ
ಇನ್ನು ಯಾರು ಕೊಡದ ಬೆಳಕ ನೀಡುತ್ತ
ಸುತ್ತಲಾರೆ ದೇಶಗಳ
ದಾಟಲಾರೆ ನನ್ನ ಕಾಲದ ಮಿತಿಗಳ
ಕಾಲು ಕುಸಿಯುವುದು ಮನಸು ಸೋಲುವುದು
ಇನ್ನೆಷ್ಟು ದೂರ?
ಎಲ್ಲ ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು

ಸೂರ್ಯನ ಬಳಿ ಹಾರಿದವನ
ಗತಿಯೇನಾಯಿತು ?-ಎಂದು ಕೇಳಿದರವರು
ರೆಕ್ಕೆಗಳು ಕರಗಿ
ಬಿದ್ದನು ನೆಲಕ್ಕೆ-ಎಂದು ಹೇಳಿದರು
ಬಿದ್ದು ಹೊರಳಾಡಿದನು
ಬೆಂಕಿಯಲಿ ನರಳಿದನು- ಎಂದು ಬಣ್ಣಿಸಿದರು
ಬಿದ್ದವನ ಸಮಾಧಿಯನು
ಬಿಡಲಿಲ್ಲ ಜನರು
ಹಸಿರು ಹುಲ್ಲನು ಕೆದಕಿದರು
ಕಲ್ಲು ಗಾರೆಗಳನು ಕೆಡೆವಿದರು
ಹಿಂದೆ ವಾಕ್ಯಗಳು ಇದ್ದಲ್ಲಿ
ಈಗ ಏನಿಲ್ಲ-ಆಚೀಚೆ
ಚದುರಿ ಬಿದ್ದಿವೆ ಕಲ್ಲುಗಳು
ಅಕ್ಷರಗಳ ಹೆಕ್ಕಿ ಜೋಡಿಸುತ್ತಲೆ ಇರುವೆ
ಅವು ಮೂಡಿಸುವ ವಾಕ್ಯಗಳೇನು
ಅರ್ಥಗಳೇನು
ಹೇಳುವುದು ಹೇಗೆ
ಎಲ್ಲ ಅಕ್ಷರಗಳೂ ಸಿಗುವ ವರೆಗೆ-
ಎಲ್ಲವನು ಕಂಡವನು ನೀನು, ಕೆಪ್ಲರ್
ಕಾಣುವ ಬಗೆ ಹೇಳು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್