ವಿಪರ್ಯಾಸ

ಏನು ಬರೆಯಲಿ ಏನು ಹಾಡಲಿ
ದಿನದ ಕಾವ್ಯಕೆ ಶುಭನುಡಿ,
ನಿತ್ಯದುದಯವು ಬರೆವ ಮುನ್ನುಡಿ
ಪುಟ-ಪುಟಕೂ ನೀಡಲು ಕೆಂಗಿಡಿ,

ನಿಸರ್ಗ ಸಗ್ಗವು ಬೆಂಗಾಡಾಗಿರೆ
ಇನ್ನೆಲ್ಲಿ ಪೂಜೆಯು ಪ್ರಕೃತಿಗೆ,
ಇಂಚರದ ಬಳಗಕೆ ಠಾವೆ ಇರದಿರೆ
ಎಲ್ಲಿನ್ನೆಲ್ಲಿ ಗಾನವು ಕೊಳಲಿಗೆ,

ರಾಯರಳಿದರು ರಾಯತನವು ತಾ ಸಾಗಿರೆ,
ಯಾವ ನೆಲೆಯಿದೆ ಹಸಿವಿನೊಡಲಿಗೆ,
ಧರ್ಮದರ್ಥವು ಅನರ್ಥವಾಗಿರೆ
ಇನ್ನಾವ ಬೆಲೆಯಿದೆ ದೇವ ಪ್ರೀತಿಗೆ….

ಜಗವೆ ಮಾರುವ ಕಟ್ಟೆಯಾಗಿರೆ
ಕೊಡು ಕೊಳ್ಳುವವರೆತ್ತಬಲ್ಲರು ಮಾನ’ವ
ಸರಕು ನೂಪುರ ಗಂಟೆ ಮೊಳಗಿರೆ
ಸುಪ್ರಭಾತವೆಲ್ಲಿಯೋ ಮಾನವ….

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರಗೊಡವಿನ್ನೇನು ಮಗಳೆ
Next post ದೇವರಿಗೆ ಬಿಟ್ಟಿದ್ದು

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys