ವ್ಯಸನಕೋಣೆ

ವ್ಯಸನಕೋಣೆಯಲಿ ನಮ್ಮ ಕಥಾನಾಯಕಿ ಬಿಳಿಯ
ವಸನಧಾರಿ ಮಲಗಿರುವಳಂತೆ ಯಾರಿಗೂ ತಿಳಿಯ-
ದವಳ ಬೇಸರದ ಮೂಲ

ಘನ ಸರಕಾರವೇನೂ ಸುಮ್ಮನೆ ಕೂತಿಲ್ಲ ಕೈಕಟ್ಟಿ
ಮನೆಯ ಸುತ್ತಲೂ ನಿಲ್ಲಿಸಿದೆ ಕಾವಲಿಗೆಂದು ಗಟ್ಟಿ
ಗೂಢಚಾರರ ಜಾಲ

ಸುಮ್ಮನೆ ಓಡಾಡುವವರ ಮೇಲೆ ಕಣ್ಣಿರಿಸಿ
ಗುಮಾನಿ ಬಂದವರ ಜೇಬುಗಳನರಸಿ
ತಿರುಗಾಡುವರು ಗಸ್ತು

ಸಮಸ್ಯೆಗಳ ಮೂಲಗಳ ಹುಡುಕಬಲ್ಲಂತಹ
ವಿಮರ್ಶಕ ಬುದ್ಧಿಜೀವಿಗಳ ವರ್ಗ ಸಹ
ಆಗಿಬಿಟ್ಟಿದೆ ಸುಸ್ತು

ಮಾಯವಾಗಿರುವರೆಷ್ಟೋ ಜನ ಇದ್ದಕಿದ್ದಂತೆ
ಸಾಯದೆಯೆ ಉಳಿದವರಿಂದ ತುಂಬಿರುವುದಂತೆ
ದೇಶದ ಬಂದೀಖಾನೆ

ಅದರೊಂದಿಗೇ ಹುಟ್ಟಿಕೊಳ್ಳುವುದು ಭೂಗತ ಸಾಹಿತ್ಯ
ಸದೆಬಡಿತ ಸರ್ವಾಧಿಕಾರ ನಿರಂಕುಶತ್ವ ಅಸತ್ಯ
ಸಾಹಿತಿಗಳಿಗೆ ಸ್ಫೂರ್ತಿ ತಾನೆ!

ಇತ್ತ ನಾಯಕಿಯೂ ಬದುಕಿಲ್ಲ ಎಷ್ಟೋ ದಿನಗಳ ಕೆಳಗೆ
ಸತ್ತು ಹೋದಳು ಎಂದು ಕಿವಿಯಿಂದ ಕಿವಿಗೆ
ಹಬ್ಬಿರುವುದು ವದಂತಿ

ತೆರೆಸಿ ನೊಡುವುದಕ್ಕೆ ಸರ್ವಥಾ ಒಪ್ಪುವುದಿಲ್ಲ
ಸರಕಾರ-ಎಲ್ಲ ಸರ್ವಾಧಿಕಾರದ ಹಿಂದೆಯೂ ಒಂದಲ್ಲ
ಒಂದು ಭಯಂಕರ ಭ್ರಾಂತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರಿವಿನ ವಾಟೆ
Next post ಸುಖ

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…