Home / ಕವನ / ಕವಿತೆ / ಹಬ್ಬಿದ ಬಳ್ಳಿ

ಹಬ್ಬಿದ ಬಳ್ಳಿ

ಪ್ರೀತಿ ಬಳ್ಳಿಯು ಹಬ್ಬಿದೆ
ಧರಣಿಯೆದೆಯ ಹಾಸಿನಲ್ಲಿ,
ನೀಲ ಮುಗಿಲ ಲೋಕದಲ್ಲಿ
ಗಾನ ಸುಧೆಯು ಸಾಗಿದೆ…

ನಾನೇ – ನೀನು, ನೀನೆ – ನಾನು,
ಬುವಿಯೆ – ಬಾನು, ಬಾನೇ ಬುವಿಯು,
ಸೇತುವಾಗಿ ಬೆಸೆದಿದೆ…
ಮೊದಲು ಕೊನೆಗಳಿಲ್ಲವಿಲ್ಲಿ
ಪ್ರೀತಿ – ಚೈತ್ರ ಸರಣಿಯಲ್ಲಿ,
ಕಾಲ ಯಾತ್ರೆಯು ನಡೆದಿದೆ…

ಮೋಡಗಟ್ಟಿ ಮಳೆಯ ಸುರಿಸಿ,
ಹರವದಾರಿಲಿ ಹಸಿರಗಟ್ಟಿಸಿ,
ಕಡಲಾಗಿ ಪ್ರೀತಿಯು ನುಡಿದಿದೆ…
ಉದಯೋದಯಕು ಶುಭದ ಹಕ್ಕಿ,
ಶಕುನ ಸ್ವರದಲಿ ಉಲಿದಿದೆ,
ಮಧುರ ಭಾವಗೀತೆಯ ಹಾಡಿದೆ…

ನನ್ನ – ನಿನ್ನಯ, ನಿನ್ನ – ನನ್ನಯ,
ಬಳಸಿನಿಂತ ಚೆಲ್ವ ಬಾಳ್ವೆಯ,
ಸಾಲು ತೋಪಲಿ ಹಸಿರ್‍ಹುಸಿರಾಗಿದೆ…
ಬಳ್ಳಿಗಾಸರೆಯಾದ ಮರದಲಿ
ಪ್ರೀತಿ ಚಂದನ ಹರಡಿದೆ
ಜಗದ ಬದುಕನು ಹಿಡಿದಿದೆ…

*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...