Home / ಕವನ / ಕವಿತೆ / ದಾವಾನಲ ಧಾರಿಣಿ ಜಲ

ದಾವಾನಲ ಧಾರಿಣಿ ಜಲ

ದಾವಾನಲ ಧಾರಿಣಿ ಜಲ ಆಗಸ ಅನಿಲದಲಿ
ಮಾಯದ ಗಾಯದ ಮಣ್ಣಿನ ಕಾಯದ ಹಂಗಿನಲಿ
ಸಾರದ ಸೇರದ ಎಂದೂ ಆರದ ಘನ ತರಣಿ
ಇರುಳಾಳುವ ಮನದಾಳಕೆ ಸುರಿ ಕಿರಣವ ಕರುಣಿ

ಎದೆಯಾಳದಿ ಎವತೆರದಿವೆ ಗತಭವಗಳು ಹೊರಳಿ
ಎಂದಿನ ಸ್ಮರಣೆಯ ಅರಣಿಯೊ ಹೊಗೆಯಾಡಿದೆ ನರಳಿ,
ಮೆಲೇಳುವ ಬಿಳಿ ಧೂಮದ ಜಾಲದ ಹಂಗಿನಲಿ
ಎಡವಿದೆ ಮತಿ ವಾದದ ಗತಿ, ಸುಳಿ ಬಿಚ್ಚಿದೆ ಕದಳಿ.

ಗಿರಿಹುತ್ತದ ತುಡಿಗೆತ್ತಿದ ದಿಙ್ನಾಗರ ಭೋಗ
ಸೆಳೆಯುತ್ತಿದೆ ಅಳೆಯುತ್ತಿದೆ ಅನುರಾಗದ ಆಳ
ಕರೆಯುತ್ತಿದೆ “ಬಾರೇ ಬಾ ನೀರೇ ನಿಧಿ ಸಾರೇ
ಇಡಿಚಿತ್ತದ ಮಧುಭಾಂಡದಿ ಏನೇನಿದೇ ತಾರೇ”

ಗಣಿಯಾಳದ ಜಲ ಮೇಲಕೆ ಜುಳು ಜುಳು ಜುಳು ಹರಿದು
ಯೋಗದ ಕಡಲಿಗೆ ಎಚ್ಚರ ನಿದ್ದೆಯ ತೊರೆ ನೆರೆದು
ಸಾಗುವ ಡೊಂಕಿನಲಾಗಲಿ ತೂಗಾಟದ ರಾಗ
ಹಾಲಿನ ಹರವಿಯ ಸಿಡಿಸುವ ಬೃಂದಾವನ ಭೋಗ.

ಮಾಗಿಯ ರಾತ್ರಿಯ ಮಂಜಿನ ಮಬ್ಬಿನ ತೆರೆ ಸರಿದು
ಕಾಣದ ನಿಜವಿಶ್ವದ ಹೊಸದರ್ಶನಗಳು ತೆರೆದು
ಸಾವಿರದಾ ನವವಸಂತ ಮಾವಿನ ಹರೆಯೇರಿ
ಕೂಗುವ ಕೋಗಿಲೆಯಾಗಲಿ ಜೀವವು ತೇಷೆಯಾರಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...