ವಧುವಿನಂತೆ ಕಾದಿದೆ

ವಧುವಿನಂತೆ ಕಾದಿದೆ
ವರಣಮಾಲೆ ನೇದಿದೆ
ನಿನ್ನ ವರಿಸಲೆಂದು ಲೋಕ ಕಾತರದಲಿ ಕಾದಿದೆ,
ಬಾ ಬಾ ಹೊಸ ಕಾಲವೆ
ಹೊಸ ಹಾಡಿಗೆ ತಾಳವೆ
ಬಾಳ ಕುಣಿಸುವಂಥ ಗರವ ಬೀಳಿಸುವಾ ದಾಳವೆ!

ಬಾ ಬಾ ಹೊಸವರ್ಷವೆ
ವಧುಗೆ ವರನ ಸ್ಪರ್ಶವೆ,
ಬೆಂದ ಮನಕೆ ಅನಂದವ ತಾ ಅಶಾವೃಷ್ಟಿಯೆ;
ನೀ ಬಾಳಿನೊಳಾಡಿ
ಆಗಲಿ ಹೊಸ ಮೋಡಿ
ಏಳಲಿ ಇಳೆ ಹಳೆಯ ನೋವ ನೆನಪಿನಿಂದ ದೂಡಿ.

ಹಳೆಯದೇನೆ ಇರಲಿ,
ಹೊಸ ಕನಸಿನ ಮುರಳಿ
ಕರೆಯುತ್ತಿದೆ ತೆರೆಯುತ್ತಿದೆ ನವ ಅನುಭವ ಸುರುಳಿ.
ಗೆಜ್ಜೆ ತೊಡಿಸಿ ಅಡಿಗೆ
ಹೂವ ಸಲಿಸಿ ಮುಡಿಗೆ
ಹಾಡಿ ಕರೆವ ಹೊಸದಿನಗಳ ನಮ್ಮ ಲೋಕದೊಳಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲ್ಲಂಗಡಿ
Next post ಸುಖ ಸಂಸಾರ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys