ಬಾನು ರೆಪ್ಪೆ ಮುಚ್ಚುತಿದೆ

ಬಾನು ರೆಪ್ಪೆ ಮುಚ್ಚುತಿದೆ
ಇರುಳು ಸೆರಗ ಹೊಚ್ಚುತಿದೆ,
ತಾರೆ ಚಂದ್ರ ತೀರದಲ್ಲಿ
ನಕ್ಕು ಹರಟೆ ಕೊಚ್ಚುತಿವೆ,
ಮಾತಾಡದೆ ಸಂಭ್ರಮದಲಿ
ತೇಕಾಡಿದೆ ಮುಗಿಲು,
ಹಾಡಲು ಶ್ರುತಿಗೂಡುತ್ತಿದೆ
ಬೆಳುದಿಂಗಳ ಕೊರಳು!

ದಡವ ಕೊಚ್ಚಿ ಹರಿಯುತಿದೆ
ನದಿಗೆ ಮಹಾಪೂರ,
ಗಡಿಯ ದಾಟಿ ಹಬ್ಬುತಿದೆ
ಪಾರಿಜಾತ ಸಾರ,
ಹಳೆತ ಎಸೆದು ಹೊಸರೂಪಕೆ
ತಡಕುತ್ತಿದೆ ಜೀವ,
ತಳಮಳಿಸುತ ತಾಳಿದೆ
ಹೊಸ ಸೃಷ್ಟಿಯ ನೋವ

ಬಂತು ಹೇಗೆ ಎಲ್ಲಿಯದೀ
ಕೊಳಲಿನ ತೆಳುನಾದ?
ಗೆಜ್ಜೆಕಟ್ಟಿ ಕುಣಿಯಲು
ತವಕಿಸುತಿದೆ ಪಾದ;
ನೋವಿನಾಳದಿಂದ ಚಿತ್ತ
ಮೇಲೆ ತೇಲಿ ಬರುತಿದೆ
ಮಿಂಚುವಂಥ ನವಸೃಷ್ಟಿಗೆ
ಸಂಚು ಸಿದ್ಧಗೊಳುತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೪
Next post ಜಾಣ ಕುರುಡೇ?

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

cheap jordans|wholesale air max|wholesale jordans|wholesale jewelry|wholesale jerseys