ಸ್ವಾಗತ ಸಂಕ್ರಾಂತಿಯೇ!

ಸ್ವಾಗತ ಸಂಕ್ರಾಂತಿಯೇ
ಕಾಲ ತರುವ ಕ್ರಾಂತಿಯೇ,
ಹೊಸ ಬಾಳಿಗೆ ಹಸೆ ಹಾಸುವ
ಮಿತ್ರಾರುಣ ಕಾಂತಿಯೇ

ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ,
ಬಳಲಿದ ಕಾಲಿಗೆ ಬಲವ ಊಡುವಂಥ ವರವೆ,
ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ,
ಬವಣೆಯ ಭಾರವ ನೀಗಿ, ಬಾ ಓ ಸಂಕ್ರಾಂತಿಯೇ!

ಕಾಣದೊಂದು ಪಥಕೆಳೆಯುವ ಅನಿರೀಕ್ಷಿತ ಪಯಣವೆ
ಹೊಸ ಕಾಣ್ಕೆಗೆ ಎವೆ ಬಿಚ್ಚುವ ಬೆಳಕಿನೊಂದು ನಯನವೆ
ಎಳ್ಳು ಬೆಲ್ಲ, ಜಲ್ಲೆ ಕಬ್ಬು ನಾಂದಿಯಾದ ಅಯನವೆ
ಭಾವೀ ದಿನಗಳ ಭಾಗ್ಯದ ಕದತೆರೆಯುವ ಕಿರಣವೆ!

ಬರಿ ಗಾಳಿಯೆ? ಬರಿ ಜಲವೇ? ಬರಿ ಬೆಳಕೇ? ಅಲ್ಲ,
ಬದಲಾಗಲಿ ಮುಡಿಯ ತನಕ ಇಡೀ ದೇಶವೆಲ್ಲ,
ಸತ್ಯ ಸ್ವಾಭಿಮಾನಯುಕ್ತ, ಭೇದಮುಕ್ತ ಮನವ
ನೀಡಲಿ ಈ ಸಂಕ್ರಾಂತಿ ನೀಡಲಿ ಹೊಸ ದಿನವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೧೪
Next post ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

cheap jordans|wholesale air max|wholesale jordans|wholesale jewelry|wholesale jerseys