ಸ್ವಾಗತ ಸಂಕ್ರಾಂತಿಯೇ!

ಸ್ವಾಗತ ಸಂಕ್ರಾಂತಿಯೇ
ಕಾಲ ತರುವ ಕ್ರಾಂತಿಯೇ,
ಹೊಸ ಬಾಳಿಗೆ ಹಸೆ ಹಾಸುವ
ಮಿತ್ರಾರುಣ ಕಾಂತಿಯೇ

ಬರಿಹೆಜ್ಜೆಗೆ ಕಿರುಗೆಜ್ಜೆಯ ಕಟ್ಟುವಂಥ ಕರವೆ,
ಬಳಲಿದ ಕಾಲಿಗೆ ಬಲವ ಊಡುವಂಥ ವರವೆ,
ಕನಸಿನ ಹೆದೆ ಚಿಮ್ಮಿದ ಆಕಾಂಕ್ಷೆಯ ಶರವೆ,
ಬವಣೆಯ ಭಾರವ ನೀಗಿ, ಬಾ ಓ ಸಂಕ್ರಾಂತಿಯೇ!

ಕಾಣದೊಂದು ಪಥಕೆಳೆಯುವ ಅನಿರೀಕ್ಷಿತ ಪಯಣವೆ
ಹೊಸ ಕಾಣ್ಕೆಗೆ ಎವೆ ಬಿಚ್ಚುವ ಬೆಳಕಿನೊಂದು ನಯನವೆ
ಎಳ್ಳು ಬೆಲ್ಲ, ಜಲ್ಲೆ ಕಬ್ಬು ನಾಂದಿಯಾದ ಅಯನವೆ
ಭಾವೀ ದಿನಗಳ ಭಾಗ್ಯದ ಕದತೆರೆಯುವ ಕಿರಣವೆ!

ಬರಿ ಗಾಳಿಯೆ? ಬರಿ ಜಲವೇ? ಬರಿ ಬೆಳಕೇ? ಅಲ್ಲ,
ಬದಲಾಗಲಿ ಮುಡಿಯ ತನಕ ಇಡೀ ದೇಶವೆಲ್ಲ,
ಸತ್ಯ ಸ್ವಾಭಿಮಾನಯುಕ್ತ, ಭೇದಮುಕ್ತ ಮನವ
ನೀಡಲಿ ಈ ಸಂಕ್ರಾಂತಿ ನೀಡಲಿ ಹೊಸ ದಿನವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೧೪
Next post ಐನ್‌ಸ್ಟನ್ ಮಿದುಳಿನ ಬುದ್ಧಿವಂತಿಕೆಯ ರಹಸ್ಯ!

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…