ಯಾವ ಸೌಭಾಗ್ಯ ಸಮ ಈ ಚೆಲುವಿಗೆ?

ಯಾವ ಸೌಭಾಗ್ಯ ಸಮ ಈ ಚಲುವಿಗೆ
ಪ್ರೀತಿ ಚಿಮ್ಮುವ ತಾಯ ಮೊಗದ ಸಿರಿಗೆ?

ಸಾಲು ಹಿಮಗಿರಿ ಇವಳ ಹೆಮ್ಮೆಯ ಮುಡಿ
ಸಾಗರವೆ ಬಿದ್ದಿಹುದು ಕಾಲಿನ ಅಡಿ,
ಹಣೆಯಲ್ಲಿ ಮುಗಿಲ ಮುಂಗುರುಳ ದಾಳಿ
ಉಸಿರಾಡುವಳು ಮರುಗ ಮಲ್ಲಿಗೆಯಲಿ.

ಉದಯರವಿ ಹಣೆಗಿಟ್ಟ ಭಾಗ್ಯಬಿಂಬ
ಆಗಸದ ಕಪ್ಪು ಜಡೆ ಬೆನ್ನ ತುಂಬ,
ಸಾಲು ತೇಲುವ ಹಸಿರುಗಿಳಿಯ ಮಾಲೆ
ಸರವಾಗಿ ಹೊಳಿಯುತಿದೆ ಎದೆಯ ಮೇಲೆ.

ರಾಮಕೃಷ್ಣರು ಇವಳ ಧೀರಭಾವ
ವ್ಯಾಸ ಶುಕ ವಾಲ್ಮೀಕಿ ಜ್ಞಾನದಾಹ,
ಇವಳ ಸಹನೆಗೆ ಹೆಸರು ಸೀತೆಯೆಂದು
ಪ್ರೀತಿ ಕ್ಷಮೆ ಕರುಣೆಯೇ ನೀತಿ ಎಂದೂ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಖಾಲಿ ಆಕಾಶದ ಮೌನ
Next post ಮುಕ್ತಕ – ವಚನ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys