ಶರಣಾದೆ ತಾಯೆ ಶರಣಾದೆ ಕಾಯೆ

ಶರಣಾದೆ ತಾಯೆ ಶರಣಾದೆ ಕಾಯೆ,
ನೆಲ ಕಾಡು ತೊರೆಯೆ, ಹಿರಿಸಾಲು ಗಿರಿಯೆ
ಒಡಲಾದ ಸಿರಿಯೆ.

ನೀ ತೆರೆದ ಕಣ್ಣುಗಳ ಕಾಂತಿಯೇ ಹಗಲು,
ಬೆಳಗೀತು ಭುವನವೇ ನೀನೊಮ್ಮೆ ನಗಲು;
ಕೋಪಿಸಲು ಆಕಾಶ ಕಾರುವುದು ಸಿಡಿಲು,
ಇರುಳೊಂದು ಎಲ್ಲಿದೆಯೆ ನಿನ್ನದೇ ನೆರಳು!

ಹೊಲದಲ್ಲಿ ತೂಗುವ ತೆನೆಗಳೇ ಸೆರಗು,
ಮರಬಳ್ಳಿ ಓಲಾಡಿ ಮೈತುಂಬ ಬೆರಗು,
ದೇಗುಲದ ಗಂಟೆಯಲಿ ದನಿತೆರೆದು ಕೊರಳು
ಶತ್ರುಗಳ ಎದೆಯಲ್ಲಿ ಬಿಚ್ಚುತಿದೆ ದಿಗಿಲು.

ಅಮ್ಮ ನಮ್ಮನು ನಿನ್ನ ಪ್ರೀತಿಯಲಿ ಮೆರೆಸೆ
ಪ್ರೀತಿ ಶಾಂತಿಯ ಅಮೃತ ಎದೆತುಂಬ ಸುರಿಸೆ;
ತಂದೆನಿದೂ ನಿನಗಾಗಿ ಕವಿತೆಗಳ ಮಾಲೆ
ಶೋಭಿಸಲಿ ನಿತ್ಯವೂ ನಿನ್ನದೆಯ ಮೇಲೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದೇ ಮುಖ
Next post ತಾಪತ್ರಯ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

cheap jordans|wholesale air max|wholesale jordans|wholesale jewelry|wholesale jerseys