ತಾಯೇ ನಿನ್ನ ಪ್ರೀತಿಯ ಬಾಗಿನ

ತಾಯೇ ನಿನ್ನ ಪ್ರೀತಿಯ ಬಾಗಿನ
ಎಲ್ಲಕು ಮೀರಿದ್ದೆ,
ಗಾಳಿ, ನೀರು, ಅನ್ನದ ರಕ್ಷೆ
ಮಾತಿಗೆ ನಿಲುಕದ್ದೆ.

ಕನ್ನಡದಂಥ ಕಂಪಾಡುವ ನುಡಿ
ನಾಲಿಗೆಗೇರಿದ್ದು,
ಪಂಪ ಕುವೆಂಪು ಕುಮಾರವ್ಯಾಸ
ಬಂಧುಗಳಾದದ್ದು,

ಸಾಮಾನ್ಯವೆ ಶ್ರೀ ಪುರಂದರ ಬಸವ
ಜಕಣರು ಕಡೆದದ್ದು,
ಕನ್ನಂಬಾಡಿಯ ಬಣ್ಣದ ಬೆಡಗು
ಲೋಕವ ಮಣಿಸಿದ್ದು

ಭಾರಿ ಅರಳಿಮರ, ನಡುವೆ ಪುಟ್ಟ ಎಲೆ
ಎಲೆಗೆ ಎಂಥ ಬೆರಗು!
ನಿನ್ನ ಪರಂಪರೆಯಲ್ಲಿ ಬಂದು ನಾ
ಯಾರಿಗೂನು ಮಿಗಿಲು.

ಕಾಲಿಗೆ ಎರಗಿದೆ ಕಾಪಾಡಮ್ಮ
ನಿನ್ನ ಕಂದನನ್ನು,
ಸದಾ ನೆನೆವೆ ನಾ ನನ್ನೀ ಹೆಮ್ಮೆಯ
ಕನ್ನಡ ನಾಡನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಮ್ಮನಿದ್ದದ್ದು ಸಾಕು
Next post ಇಣಕು ನೋಟ

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…