ತಾಯೇ ನಿನ್ನ ಪ್ರೀತಿಯ ಬಾಗಿನ

ತಾಯೇ ನಿನ್ನ ಪ್ರೀತಿಯ ಬಾಗಿನ
ಎಲ್ಲಕು ಮೀರಿದ್ದೆ,
ಗಾಳಿ, ನೀರು, ಅನ್ನದ ರಕ್ಷೆ
ಮಾತಿಗೆ ನಿಲುಕದ್ದೆ.

ಕನ್ನಡದಂಥ ಕಂಪಾಡುವ ನುಡಿ
ನಾಲಿಗೆಗೇರಿದ್ದು,
ಪಂಪ ಕುವೆಂಪು ಕುಮಾರವ್ಯಾಸ
ಬಂಧುಗಳಾದದ್ದು,

ಸಾಮಾನ್ಯವೆ ಶ್ರೀ ಪುರಂದರ ಬಸವ
ಜಕಣರು ಕಡೆದದ್ದು,
ಕನ್ನಂಬಾಡಿಯ ಬಣ್ಣದ ಬೆಡಗು
ಲೋಕವ ಮಣಿಸಿದ್ದು

ಭಾರಿ ಅರಳಿಮರ, ನಡುವೆ ಪುಟ್ಟ ಎಲೆ
ಎಲೆಗೆ ಎಂಥ ಬೆರಗು!
ನಿನ್ನ ಪರಂಪರೆಯಲ್ಲಿ ಬಂದು ನಾ
ಯಾರಿಗೂನು ಮಿಗಿಲು.

ಕಾಲಿಗೆ ಎರಗಿದೆ ಕಾಪಾಡಮ್ಮ
ನಿನ್ನ ಕಂದನನ್ನು,
ಸದಾ ನೆನೆವೆ ನಾ ನನ್ನೀ ಹೆಮ್ಮೆಯ
ಕನ್ನಡ ನಾಡನ್ನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಮ್ಮನಿದ್ದದ್ದು ಸಾಕು
Next post ಇಣಕು ನೋಟ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys