ಅಮ್ಮ ನಿನ್ನ ಕರುಣೆಯ

ಅಮ್ಮ ನಿನ್ನ ಕರುಣೆಯ ನಾ
ಸದಾ ಮನದಿ ನೆನೆವೆ
ನೂರು ರೂಪಗಳಲಿ ನಮ್ಮ
ಭಾಗ್ಯವ ನೀ ಬೆಳೆವೆ

ಮಲೆನಾಡಿನ ಕಾಡುಗಳಲಿ
ಮೈಪಡೆದ ಬಲವೆ,
ಅಡಿಕೆ ತೆಂಗು ಸಾಲು ಸಾಲು
ಸೇನೆ ನಿಂತ ನಿಲವೆ,
ಶಾಲಿವನದ ತೆನೆಗಳಲ್ಲಿ
ತೂಗುವನ್ನಪೂರ್ಣೆಯೇ,
ಚೆಲುವಿನಷ್ಟೊ ಹೊನಲು ಸೇರಿ
ಆದ ಮಹಾರ್ಣವವೇ.

ಐಹೊಳೆ ಬಾದಾಮಿಯಲಿ
ಶಿಲೆ ಹಾಡುವ ಗೀತವೇ,
ಪುರಂದರಶ್ರುತಿ ಚಿಮ್ಮುವ
ಕರ್ನಾಟಕ ಸಂಗೀತವೇ,
ನೃಪತುಂಗನಿಗೂ ಮುಂಚಿನ
ಕಾವ್ಯರಾಜ ಮಾರ್ಗವೇ,
ಸಹಸ್ರಾರು ಸಂವತ್ಸರ
ಶಾಸನ ಸೌಭಾಗ್ಯವೇ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಳೆದು ಹೋದವನು
Next post ನಾನು

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…