Home / ಕವನ / ಕವಿತೆ / ಇತಿಹಾಸಕು ಹಿಂದೆಯೇ ಹೊತ್ತಿ ಉರಿದ ಜ್ಯೋತಿ

ಇತಿಹಾಸಕು ಹಿಂದೆಯೇ ಹೊತ್ತಿ ಉರಿದ ಜ್ಯೋತಿ

ಇತಿಹಾಸಕು ಹಿಂದೆಯೇ ಹೊತ್ತಿ ಉರಿದ ಜ್ಯೋತಿಯೇ
ಹಸಿದ ವರ್ತಮಾನಕೆ ಹಾಲುಣಿಸುವ ಮಾತೆಯೇ
ಬರಲಿರುವ ನಾಳೆಗೂ ಭರವಸೆಯಾ ಹಸಿರೇ
ರಾಮನು ಬರೀ ಹೆಸರೇ, ಅಲ್ಲವೆ ನಮ್ಮುಸಿರೇ?

ಬೆಳೆವ ಮರದ ಸತ್ವ ಮೊಳಕೆಯಲ್ಲೆ ಕಾಣದೆ?
ಋಷಿ ಯಜ್ಞವ ಬಾಲಕ ರಕ್ಷಿಸುವುದು ಸಾಲದೆ?
ಮಹಾ ಮಹಾ ವೀರರ ಮಣಿಸಿದಂಥ ಧನುವ
ಹದೆಯೆಳೆದು ಮುರಿವುದು ಸಾಮಾನ್ಯರ ಥರವೇ?

ಹಿರಿಯರ ನುಡಿ ಸತ್ಯವಾಗಿ ಕುಲ ಉಳಿಯಲಿ ಎಂದು
ಸತ್ಯದೆದುರು ಸಿಂಹಾಸನ ಮಣ್ಣಿನ ಹುಡಿ ಎಂದು
ಸಿರಿಗೆ ಮೀರಿದಂಥ ಘನತೆ ನಡತೆಯಲಿದೆ ಎಂದು
ತೋರಿದವನ ಪೂಜಿಸದೇ ಮನೆ ಮನೆಯೂ ಇಂದು?

ನೆರಳಿನಂತೆ ಹಿಂದೆ ಬಂದ ತಮ್ಮನ ಜೊತೆಗೂಡಿ
ಅರಮನೆಗೂ ಪತಿ ಮಿಗಿಲು ಎಂದವಳೊಡಗೂಡಿ
ಕಾಡು ಮೇಡು ಅಲೆದರೂ ಬೆಳೆದು ನಿಂತ ತೇಜ
ಅದರ ಸಮಕೆ ಬೆಳೆಯಬಲ್ಲ ಯಾವ ಮಹಾರಾಜ?

ಕಳೆದುಹೋದ ಮಡದಿಗೆ ಹಗಲಿರುಳೂ ತಪಿಸಿ
ಕಪಿಗಳಲೂ ಆಂಜನೇಯ ವೃಕ್ತಿತ್ವವ ಹರಸಿ,
ಎದುರಾದರೆ ರಾಕ್ಷಸಕುಲ ತರಿದೆಸೆದಾ ಧೀರ
ಮಣ್ಣಿನಿಂದ ಮುಗಿಲ ತನಕ ಬೆಳೆದ ಮಹಾಸಾರ!

ಸಾವಿರಾರು ಮರುಷದಾಚೆ ಬೆಳೆದು ನಿಂತ ಚೇತನ
ಕಂಗೊಳಿಸಿದೆ ತಾರೆಯಾಗಿ ಇಂದಿಗೂ ವಿನೂತನ
ಬಾನಗಲಕೆ ಬೆಳೆದ ರಾಮವೃಕ್ಷ ಇದು ಸನಾತನ
ಶೀಲ ಧರ್ಮ ಸಂಸ್ಕೃತಿಗಳ ಜೀವಂತ ನಿಕೇತನ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...