ಇಂದ್ರಗಿರಿಯ ನೆತ್ತಿಯಲ್ಲಿ

ಇಂದ್ರಗಿರಿಯ ನೆತ್ತಿಯಲ್ಲಿ ನಿಂತ ಮಹಾಮಾನವ
ನೀಡು ನಮಗೆ ನಮ್ಮೊಳಗನು ಕಂಡುಕೊಳುವ ಧ್ಯಾನವ

ಹೌದು ನೀನೇ ಮಹಾಬಲಿ, ಹೆಣ್ಣು ಹೊನ್ನು ಗೆದ್ದೆ
ನಿಜದ ಬೆಳಕ ಕಾಣಬಯಸಿ ನಿದ್ದೆಯಿಂದ ಎದ್ದೆ ;
ಕಾಳಗದಲಿ ಗೆದ್ದೆ ನಿಜ, ಅದಕಿಂತಲು ಮಿಗಿಲು
ಗದ್ದೆ ನೀನು ನಿನ್ನನ್ನೇ ಸುಟ್ಟೆ ಭವದ ದಿಗಿಲು.

ಕೊಳೆಕಸಗಳ ಕೂಡಿ ನೆಲದಿ ಹರಿಯುತಿದ್ದ ನೀರೇ
ಆವಿಯಾಗಿ ಮುಗಿಲಾದೆ ಬಾನನಲೆವ ತೇರೇ,
ಕಣವಿದ್ದುದು ಗಣಿಯಾಯಿತು ನೋಡಿ ನಮಗೆ ಬೆರಗು
ರವಿಯ ಕಂಡು ಅಚ್ಚರಿ ಹುಲ್ಲು ಸುಡುವ ಉರಿಗೂ.

ಆತ್ಮಶಕ್ತಿ ರೂಪುಗೊಂಡು ನಿಂತ ಧೀರಶಾಸನ
ತನ್ನ ತಾನೆ ಗೆಲುವ ಬಗೆಯ ಬೋಧಿಸುವ ಧೀರನ
ನೋಡಿದೊಡನ ಶಾಂತವಾಗದೇನು ಭವದ ತಳಮಳ?
ಬೆಳಕಿಗೆ ಮುಖವಾಗದೇನು ಮನವು ನೀಗಿ ಕಳವಳ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಮ
Next post ಇತಿಹಾಸ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys