ಎಂಥ ಮಾತುಗಳ ಹೇಳಿದೆ ಗುರುವೇ

ಎಂಥ ಮಾತುಗಳ ಹೇಳಿದೆ ಗುರುವೇ
ನಮಸ್ಕಾರ ನೂರು
ಇಂಥ ನೀತಿಗಳ ಹೇಳಬಲ್ಲವನು
ಕಬೀರನಲ್ಲದೆ ಯಾರು?

ಹಿಂದೂ ಮುಸ್ಲಿಮ ಗಂಧಗಳೆಲ್ಲಾ
ಮಣ್ಣಿನ ಶರೀರಕಷ್ಟೇ;
ಆತ್ಮಕೆ ಮತದ ಬಂಧನವೆಲ್ಲಿದೆ?
ಇರುವುದು ಸತ್ಯದ ನಿಷ್ಠೆ

ವೇದ ಖುರಾನು ಗ್ರಂಥಸಾಹಿಬ
ದಾರಿಯಿವೆ ಹಲವಾರು,
ಯಾವ ದಾರಿಯಲಿ ಯಾರೆ ಬಂದರೂ
ಸಿಗುವುದು ಒಂದೇ ಊರು

ಬಯಸಿದಂತೆ ಜಿಗಿದೋಡುವ ತೊರೆಗಳು
ನಡುವೆ ನದಿಯ ಸೇರಿ
ಬಂದು ಕೂಡುವುವು ಕಡಲನು ಕೊನೆಗೆ
ತಮ್ಮ ರೂಪ ಮೀರಿ

ಪಾತ್ರೆಯ ಆಕೃತಿ ಹೇಗೆ ಇರಲಿ
ಒಳಗಾಡುವ ಜಲ ಒಂದೇ,
ಜಾತಿ ಮತವೆಲ್ಲ ಹೊರಗಿನ ಭೇದ
ಎಂದನು ಕಬೀರ ಅಂದೇ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವತಾರ
Next post ಊನ

ಸಣ್ಣ ಕತೆ

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys