ಶರೀಫಜ್ಜನಿಗೆ

ಒಂದು ಧರ್ಮಕೆ ಮೊಳೆತು ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ,
ಹನಿ ಸೇರಿ ಹೊಳೆಯಾಗಿ ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ,
ಹತ್ತು ವನಗಳ ಸುತ್ತಿ, ಹೂ ಹೂವನೂ ಮುತ್ತಿ
ಒಂದೇ ಜೇನಿನ ಹುಟ್ಟು ಕಟ್ಟಿದಾತ,
ಎಲ್ಲಿ ಹೇಳೋ ತಾತ, ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು,
ಕಾವ್ಯದಲಿ ಕಡೆದ ಆ ಮರ್ಮವನ್ನು?

ಸೃಷ್ಟಿ ಮರೆಸಿರುವ ಗುಟ್ಟುಗಳನು
ಸಪ್ತಸ್ವರ ಮೀರಿದಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ, ಮಾತಿಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು;
ಹೇಳು, ಹೇಳು ಶರೀಫ, ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು
ಮಣಿಸಿದ್ದ ಮಾತುಗಳ ಬೆಟ್ಟವನ್ನು?

ಏನು ಜೀವನ ಧರ್ಮ, ಏನು ಸೃಷ್ಟಿಯ ಮರ್ಮ
ಏನು, ಎಲ್ಲಿ, ಏಕೆ ತಾಕಿದವನು
ಬೆಟ್ಟ ಬೆಟ್ಟವ ಕುಲುಕಿ ಸಪ್ತಸಾಗರ ಕಲಕಿ
ಸೃಷ್ಟಿ ಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ, ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ ಎಲ್ಲ ಬೇರಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ,
ಬಣ್ಣ ಏಳಾದರೂ ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ,
ಗಡಿಮೀರಿ, ಮಡಿಮೀರಿ, ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ, ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು, ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಶ್ನೆ ಉತ್ತರ
Next post ವಯಾಗ್ರ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…