Home / ಕವನ / ಕವಿತೆ / ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ – ಭಜನೆ
ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ;
ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ
ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ
ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ
ತೀಟೆಗಳ ಪೂರೈಕೆ, ಭೋಗವಲ್ಲ
ನೆರೆ ಹೊರೆಯ ಮೆಟ್ಟಿ ಗಿಟ್ಟಿದ ಅರ್ಥಕಾಮಗಳು
ಪುರುಷಾರ್ಥವೆನ್ನಿಸಲು ತಕ್ಕವಲ್ಲ

ಲಕ್ಷ ವೃಕ್ಷಗಳು ಮೈಲುದ್ದ ನಿಂತಿದ್ದರೂ
ಗುಂಪಾಗಿ ನೆರೆಯದೆ ಅರಣ್ಯವೆಲ್ಲಿ ?
ಗುಂಪಿದ್ದರೂ ಬಂತೆ ತಮತಮಗೆ ಬಂದ ಜನ
ಉದ್ದೇಶ ಸ್ವಂತದ್ದು ಸಂತೆಯಲ್ಲಿ.
ಪಾತ್ರ ಕಥೆ ವಸ್ತು ಸಂವಾದ ಎಲ್ಲಾ ಇದ್ದೂ
ಅರ್ಥವಿದೆ ಕೃತಿಯ ವಿನ್ಯಾಸದಲ್ಲಿ
ಸೂತ್ರ ಕಡಿದರೆ ಮಣಿಯ ಮಾಲೆ ಚೆಲ್ಲಾಪಿಲ್ಲಿ
ವಿನ್ಯಾಸವಿಲ್ಲದೆ ಅರ್ಥವೆಲ್ಲಿ ?

ರಾಮಗಿರಿಯಿಂದ ಹೈಮಾಚಲದ ನೆತ್ತಿಗೆ
ಗಡಿಯ ರಚಿಸಿದ್ದು ಉಜ್ಜಯಿನಿ ಪ್ರತಿಭೆ
ನಾಲ್ಕು ದಿಕ್ಕುಗಳಲ್ಲು ಉಪನಿಷೋದ್ದೇಶಕ್ಕೆ
ದುಡಿದ ತೇಜಕ್ಕೆ ಕೇರಳದ ಮಿತಿಯೆ ?
ಬ್ರಹ್ಮಗಿರಿಯಲ್ಲಿ ಅಶೋಕಚಕ್ರಿಯ ಮಾತು
ಬೋಧಿವೃಕ್ಷದ ನೆರಳು ದಕ್ಷಿಣದಲಿ
ದಕ್ಷಿಣೇಶ್ವರ ಕಾಳಿದೇವಾಲಯದ ಗಂಟೆ
ಮೊಳಗಿತ್ತು ಇಡಿ ಭರತಖಂಡದಲ್ಲಿ

ಕರಿಹಸಿರು ಕೆಂಪುಗಳ ಪಗಡೆಯಾಟದ ಹಾಸು
ಹತ್ತಾರು ದಾನ್ಯ ಬಿತ್ತಿರುವ ಗದ್ದೆ
ಎಲ್ಲ ಕಾಯಿಗೆ ಒಂದೇ ಹಾಸು, ದಾಳದ ಜೋಡಿ
ನೂರು ರುಚಿ ಒಟ್ಟಾಗಿ ಊಟನಿದ್ದೆ
ವ್ಯಕ್ತಿ ಕೇಂದ್ರಕ್ಕೆ ಹತ್ತು ವೃತ್ತಗಳ ಸುತ್ತುವರಿ
ದಾಟಿ ತಾಗಲಿ ದೃಷ್ಟಿ ಕಡೆಯ ಪರಿಧಿ
ಕೋಟಿ ಬಗೆ ಡೊಂಕು ಸಂಕೀರ್ಣ ನರವ್ಯೂಹದಲಿ
ರಕ್ತ ಪರಿಚಲನೆ ಕ್ಷಣ ತಪ್ಪದಿರಲಿ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...