Home / ಕವನ / ಕವಿತೆ / ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ – ಭಜನೆ
ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ;
ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ
ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ
ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ
ತೀಟೆಗಳ ಪೂರೈಕೆ, ಭೋಗವಲ್ಲ
ನೆರೆ ಹೊರೆಯ ಮೆಟ್ಟಿ ಗಿಟ್ಟಿದ ಅರ್ಥಕಾಮಗಳು
ಪುರುಷಾರ್ಥವೆನ್ನಿಸಲು ತಕ್ಕವಲ್ಲ

ಲಕ್ಷ ವೃಕ್ಷಗಳು ಮೈಲುದ್ದ ನಿಂತಿದ್ದರೂ
ಗುಂಪಾಗಿ ನೆರೆಯದೆ ಅರಣ್ಯವೆಲ್ಲಿ ?
ಗುಂಪಿದ್ದರೂ ಬಂತೆ ತಮತಮಗೆ ಬಂದ ಜನ
ಉದ್ದೇಶ ಸ್ವಂತದ್ದು ಸಂತೆಯಲ್ಲಿ.
ಪಾತ್ರ ಕಥೆ ವಸ್ತು ಸಂವಾದ ಎಲ್ಲಾ ಇದ್ದೂ
ಅರ್ಥವಿದೆ ಕೃತಿಯ ವಿನ್ಯಾಸದಲ್ಲಿ
ಸೂತ್ರ ಕಡಿದರೆ ಮಣಿಯ ಮಾಲೆ ಚೆಲ್ಲಾಪಿಲ್ಲಿ
ವಿನ್ಯಾಸವಿಲ್ಲದೆ ಅರ್ಥವೆಲ್ಲಿ ?

ರಾಮಗಿರಿಯಿಂದ ಹೈಮಾಚಲದ ನೆತ್ತಿಗೆ
ಗಡಿಯ ರಚಿಸಿದ್ದು ಉಜ್ಜಯಿನಿ ಪ್ರತಿಭೆ
ನಾಲ್ಕು ದಿಕ್ಕುಗಳಲ್ಲು ಉಪನಿಷೋದ್ದೇಶಕ್ಕೆ
ದುಡಿದ ತೇಜಕ್ಕೆ ಕೇರಳದ ಮಿತಿಯೆ ?
ಬ್ರಹ್ಮಗಿರಿಯಲ್ಲಿ ಅಶೋಕಚಕ್ರಿಯ ಮಾತು
ಬೋಧಿವೃಕ್ಷದ ನೆರಳು ದಕ್ಷಿಣದಲಿ
ದಕ್ಷಿಣೇಶ್ವರ ಕಾಳಿದೇವಾಲಯದ ಗಂಟೆ
ಮೊಳಗಿತ್ತು ಇಡಿ ಭರತಖಂಡದಲ್ಲಿ

ಕರಿಹಸಿರು ಕೆಂಪುಗಳ ಪಗಡೆಯಾಟದ ಹಾಸು
ಹತ್ತಾರು ದಾನ್ಯ ಬಿತ್ತಿರುವ ಗದ್ದೆ
ಎಲ್ಲ ಕಾಯಿಗೆ ಒಂದೇ ಹಾಸು, ದಾಳದ ಜೋಡಿ
ನೂರು ರುಚಿ ಒಟ್ಟಾಗಿ ಊಟನಿದ್ದೆ
ವ್ಯಕ್ತಿ ಕೇಂದ್ರಕ್ಕೆ ಹತ್ತು ವೃತ್ತಗಳ ಸುತ್ತುವರಿ
ದಾಟಿ ತಾಗಲಿ ದೃಷ್ಟಿ ಕಡೆಯ ಪರಿಧಿ
ಕೋಟಿ ಬಗೆ ಡೊಂಕು ಸಂಕೀರ್ಣ ನರವ್ಯೂಹದಲಿ
ರಕ್ತ ಪರಿಚಲನೆ ಕ್ಷಣ ತಪ್ಪದಿರಲಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...