Home / ಕವನ / ಕವಿತೆ / ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ದಾಟಿ ತಾಗಲಿ ದೃಷ್ಟಿಕಡೆಯ ಪರಿಧಿ

ಪಟ್ಟಿದ್ದೆಲ್ಲ ಕಾಮಕ್ಕೆ, ಪ್ರೀತಿಗಲ್ಲ – ಭಜನೆ
ಕುಟ್ಟಿದ್ದೆಲ್ಲ ಮೋಜಿಗೆ ಭಕ್ತಿಗಲ್ಲ;
ಮೋರಿಯಲ್ಲಿಳಿದ ಜಲ ಪಾತ್ರದಲ್ಲಿದ್ದರೂ
ಕೊಚ್ಚಿ ಹೋಗಲು ಮಾತ್ರ, ಕುಡಿಯಲಲ್ಲ
ಅರ್ಥಸಾಧಕ ಗುರಿಯೆ ಬಿಟ್ಟು ಪಡುತಿರುವ ಸುಖ
ತೀಟೆಗಳ ಪೂರೈಕೆ, ಭೋಗವಲ್ಲ
ನೆರೆ ಹೊರೆಯ ಮೆಟ್ಟಿ ಗಿಟ್ಟಿದ ಅರ್ಥಕಾಮಗಳು
ಪುರುಷಾರ್ಥವೆನ್ನಿಸಲು ತಕ್ಕವಲ್ಲ

ಲಕ್ಷ ವೃಕ್ಷಗಳು ಮೈಲುದ್ದ ನಿಂತಿದ್ದರೂ
ಗುಂಪಾಗಿ ನೆರೆಯದೆ ಅರಣ್ಯವೆಲ್ಲಿ ?
ಗುಂಪಿದ್ದರೂ ಬಂತೆ ತಮತಮಗೆ ಬಂದ ಜನ
ಉದ್ದೇಶ ಸ್ವಂತದ್ದು ಸಂತೆಯಲ್ಲಿ.
ಪಾತ್ರ ಕಥೆ ವಸ್ತು ಸಂವಾದ ಎಲ್ಲಾ ಇದ್ದೂ
ಅರ್ಥವಿದೆ ಕೃತಿಯ ವಿನ್ಯಾಸದಲ್ಲಿ
ಸೂತ್ರ ಕಡಿದರೆ ಮಣಿಯ ಮಾಲೆ ಚೆಲ್ಲಾಪಿಲ್ಲಿ
ವಿನ್ಯಾಸವಿಲ್ಲದೆ ಅರ್ಥವೆಲ್ಲಿ ?

ರಾಮಗಿರಿಯಿಂದ ಹೈಮಾಚಲದ ನೆತ್ತಿಗೆ
ಗಡಿಯ ರಚಿಸಿದ್ದು ಉಜ್ಜಯಿನಿ ಪ್ರತಿಭೆ
ನಾಲ್ಕು ದಿಕ್ಕುಗಳಲ್ಲು ಉಪನಿಷೋದ್ದೇಶಕ್ಕೆ
ದುಡಿದ ತೇಜಕ್ಕೆ ಕೇರಳದ ಮಿತಿಯೆ ?
ಬ್ರಹ್ಮಗಿರಿಯಲ್ಲಿ ಅಶೋಕಚಕ್ರಿಯ ಮಾತು
ಬೋಧಿವೃಕ್ಷದ ನೆರಳು ದಕ್ಷಿಣದಲಿ
ದಕ್ಷಿಣೇಶ್ವರ ಕಾಳಿದೇವಾಲಯದ ಗಂಟೆ
ಮೊಳಗಿತ್ತು ಇಡಿ ಭರತಖಂಡದಲ್ಲಿ

ಕರಿಹಸಿರು ಕೆಂಪುಗಳ ಪಗಡೆಯಾಟದ ಹಾಸು
ಹತ್ತಾರು ದಾನ್ಯ ಬಿತ್ತಿರುವ ಗದ್ದೆ
ಎಲ್ಲ ಕಾಯಿಗೆ ಒಂದೇ ಹಾಸು, ದಾಳದ ಜೋಡಿ
ನೂರು ರುಚಿ ಒಟ್ಟಾಗಿ ಊಟನಿದ್ದೆ
ವ್ಯಕ್ತಿ ಕೇಂದ್ರಕ್ಕೆ ಹತ್ತು ವೃತ್ತಗಳ ಸುತ್ತುವರಿ
ದಾಟಿ ತಾಗಲಿ ದೃಷ್ಟಿ ಕಡೆಯ ಪರಿಧಿ
ಕೋಟಿ ಬಗೆ ಡೊಂಕು ಸಂಕೀರ್ಣ ನರವ್ಯೂಹದಲಿ
ರಕ್ತ ಪರಿಚಲನೆ ಕ್ಷಣ ತಪ್ಪದಿರಲಿ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...