Home / ಕವನ / ಕವಿತೆ / ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ
ನರಳುತ್ತಿರುವೆ
ಇಲ್ಲಿ ನೆಮ್ಮದಿ ಎಲ್ಲಿ ?
ಕೊಳೆತು ನಾರುತ್ತಿರುದ ಹಳೆಯ ಭೂತ ;
ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ,
ಎರಡು ಗಡಿಗಳ ನಡುವೆ
ಒಡೆದು ಬಿದ್ದಿದೆ ರೂಪ.
ಹೊಕ್ಕುಳಿನ ಹುರಿ ಕಡಿದು
ಹಳಿ ಬಿಟ್ಟು ಹೊರನಡೆದು
ಪ್ರತ್ಯೇಕತೆಯ ಸುಳ್ಳ ಕೋಟಿ ಕೊರಳುಗಳಲ್ಲಿ
ಕೂಗಿ ದಣಿದಿದೆ ಪಾಪ

ಚಿತ್ತ ಹೊತ್ತ ಮನುಷ್ಯ
ಚಿತ್ತವಿಲ್ಲದ ನೆಲ,
ಬೆಟ್ಟ ಮರ ಗಿಡ ಕಲ್ಲು,
ಹುಲ್ಲು ಪರಿಮಳ ಜಲ ;
ಯಾರು ಉತ್ತಮ, ಯಾರು ಅಧಮ, ಏತಕೆ, ಹೇಗೆ ?
ಯಾರು ಪಡೆಯುತ್ತಾರೆ ಯಾರಿಂದ, ಏತಕ್ಕೆ ?
ಹೇಗೆ ದುಡಿಸುತ್ತಾರೆ, ದುಡಿಸಿ ಗುಡಿಸುತ್ತಾರೆ
ಯಾರು ಯಾರನ್ನೇಕೆ ಜೀತಕ್ಕೆ ?

ಯೋಚಿಸಬರದ ಅಶೋಕ
ಋತು ತಪ್ಪದೆ ಸುರಿವ ಚಿಗುರು,
ಯೋಚಿಸಲಾಗದ ಆಲದ ಅರ್ಧ ಎಕರೆ ನೆರಳು
ಯೋಚಿಸಲಾಗದ ಮಾವು,
ಆಲೋಚಿಸಲಾಗದ ಹೂವು,
ಯೋಚಿಸುವ ಮನುಷ್ಯನನ್ನೇ
ಸಾಕುವ ಪರಿಯನ್ನು
ಆಲೋಚಿಸಬೇಕು ನಾವು

ಚಿತ್ತವೇ ಶತ್ರುವೇ ನಮಗೆ ? ಸೃಷ್ಟಿಯ ಹಡೆದ
ಮೂಲಕ್ಕೆ ಮಿಥ್ಯವೇ ?
ಅದಕ್ಕೂ ಮೀರಿದ ಶಕ್ತಿ ಜಡಕ್ಕೆ ಸಲೀಸು ದಕ್ಕಿ
ಸತ್ಯ ಪ್ರತ್ಯಕ್ಷವೆ ಅದಕ್ಕೆ ?
ಕಡಿಸಿಕೊಳ್ಳುವ ನೋವು ಕಡಿಯುವ ಜೀವಕ್ಕಿರದ
ಸ್ಥಿತಿ ಮರ್ತ್ಯಮಾತ್ರವೆ ?
ಮೂಲಪ್ರಜ್ಞೆಯ ಬಿಂಬ
ಕೋಟಿ ಚೂರುಗಳಾಗಿ
ಹಿರಿಕಡಲು ಹನಿಹನಿಗಳಾಗಿ ಒಡೆದ ವಿಕಾರ
ಗುರುತಿಸಿದರೂ ನಿಜವ ರುಚಿಯಲ್ಲಿ, ಹನಿಗೆಲ್ಲಿ
ಹಡಗುಗಳ ತೇಲಿಸುವ ಅಧಿಕಾರ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...