ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ
ನರಳುತ್ತಿರುವೆ
ಇಲ್ಲಿ ನೆಮ್ಮದಿ ಎಲ್ಲಿ ?
ಕೊಳೆತು ನಾರುತ್ತಿರುದ ಹಳೆಯ ಭೂತ ;
ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ,
ಎರಡು ಗಡಿಗಳ ನಡುವೆ
ಒಡೆದು ಬಿದ್ದಿದೆ ರೂಪ.
ಹೊಕ್ಕುಳಿನ ಹುರಿ ಕಡಿದು
ಹಳಿ ಬಿಟ್ಟು ಹೊರನಡೆದು
ಪ್ರತ್ಯೇಕತೆಯ ಸುಳ್ಳ ಕೋಟಿ ಕೊರಳುಗಳಲ್ಲಿ
ಕೂಗಿ ದಣಿದಿದೆ ಪಾಪ

ಚಿತ್ತ ಹೊತ್ತ ಮನುಷ್ಯ
ಚಿತ್ತವಿಲ್ಲದ ನೆಲ,
ಬೆಟ್ಟ ಮರ ಗಿಡ ಕಲ್ಲು,
ಹುಲ್ಲು ಪರಿಮಳ ಜಲ ;
ಯಾರು ಉತ್ತಮ, ಯಾರು ಅಧಮ, ಏತಕೆ, ಹೇಗೆ ?
ಯಾರು ಪಡೆಯುತ್ತಾರೆ ಯಾರಿಂದ, ಏತಕ್ಕೆ ?
ಹೇಗೆ ದುಡಿಸುತ್ತಾರೆ, ದುಡಿಸಿ ಗುಡಿಸುತ್ತಾರೆ
ಯಾರು ಯಾರನ್ನೇಕೆ ಜೀತಕ್ಕೆ ?

ಯೋಚಿಸಬರದ ಅಶೋಕ
ಋತು ತಪ್ಪದೆ ಸುರಿವ ಚಿಗುರು,
ಯೋಚಿಸಲಾಗದ ಆಲದ ಅರ್ಧ ಎಕರೆ ನೆರಳು
ಯೋಚಿಸಲಾಗದ ಮಾವು,
ಆಲೋಚಿಸಲಾಗದ ಹೂವು,
ಯೋಚಿಸುವ ಮನುಷ್ಯನನ್ನೇ
ಸಾಕುವ ಪರಿಯನ್ನು
ಆಲೋಚಿಸಬೇಕು ನಾವು

ಚಿತ್ತವೇ ಶತ್ರುವೇ ನಮಗೆ ? ಸೃಷ್ಟಿಯ ಹಡೆದ
ಮೂಲಕ್ಕೆ ಮಿಥ್ಯವೇ ?
ಅದಕ್ಕೂ ಮೀರಿದ ಶಕ್ತಿ ಜಡಕ್ಕೆ ಸಲೀಸು ದಕ್ಕಿ
ಸತ್ಯ ಪ್ರತ್ಯಕ್ಷವೆ ಅದಕ್ಕೆ ?
ಕಡಿಸಿಕೊಳ್ಳುವ ನೋವು ಕಡಿಯುವ ಜೀವಕ್ಕಿರದ
ಸ್ಥಿತಿ ಮರ್ತ್ಯಮಾತ್ರವೆ ?
ಮೂಲಪ್ರಜ್ಞೆಯ ಬಿಂಬ
ಕೋಟಿ ಚೂರುಗಳಾಗಿ
ಹಿರಿಕಡಲು ಹನಿಹನಿಗಳಾಗಿ ಒಡೆದ ವಿಕಾರ
ಗುರುತಿಸಿದರೂ ನಿಜವ ರುಚಿಯಲ್ಲಿ, ಹನಿಗೆಲ್ಲಿ
ಹಡಗುಗಳ ತೇಲಿಸುವ ಅಧಿಕಾರ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗುವಿತ್ತು ಹೂವಂತ ಮಾತಿತ್ತು
Next post ನಂಬಿಕೆಯೇ ದೇವರು

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮೇಷ್ಟ್ರು ಮುನಿಸಾಮಿ

    ಪ್ರಕರಣ ೮ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ.… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…